ಕ್ರೀಡೆ

ರೋಚಕ ಘಟ್ಟದಲ್ಲಿ ಭಾರತ-ಬಾಂಗ್ಲಾ 2ನೇ ಟೆಸ್ಟ್ ಪಂದ್ಯ

ಭಾರತಕ್ಕೆ ಗೆಲ್ಲಲು 100 ರನ್, ಬಾಂಗ್ಲಾ ಗೆಲುವಿಗೆ 6 ವಿಕೆಟ್ ದೂರ

ಮೀರ್ ಪುರ್: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ.
ಮೂರನೇ ದಿನ ದ್ವಿತೀಯ ಇನ್ನಿಂಗ್ಸ್ ನಲ್ಲಿ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿರುವ ಭಾರತ ಒತ್ತಡದಲ್ಲಿ ಸಿಲುಕಿದೆ. ಗೆಲ್ಲಲು ಉಳಿದ 6 ವಿಕೆಟ್ ಗೆ 100 ರನ್ ಗಳಿಸಬೇಕಾಗಿದ್ದು ಪಂದ್ಯ ಸಮಸ್ಥಿತಿಯಲ್ಲಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 314 ರನ್ ಗಳಿಗೆ ಔಟಾಗಿದ್ದ ಭಾರತ 87 ರನ್ ಗಳ ಮುನ್ನಡೆಯೊಂದಿಗೆ ವಿಶ್ವಾಸದಲ್ಲಿತ್ತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ 231 ರನ್ ಗೆ ಸರ್ವ ಪತನ ಕಂಡ ಹಿನ್ನೆಲೆಯಲ್ಲಿ ಭಾರತ ನಿರಾಯಾಸವಾಗಿ ಗೆಲ್ಲಬಹುದೆಂದು ನಿರೀಕ್ಷಿಸಲಾಗಿತ್ತು. ಭಾರತದ ಬೌಲರ್ ಗಳ ಸಂಘಟಿತ ಬೌಲಿಂಗ್ ದಾಳಿಯಿಂದಾಗಿ ಬಾಂಗ್ಲಾ ಮತ್ತೆ ಅತ್ಯಲ್ಪ ಮೊತ್ತಕ್ಕೆ ಕುಸಿಯಿತು.
ಭಾರತದ ಪರ ಅಕ್ಷರ್ ಪಟೇಲ್ 3 , ಅಶ್ವಿನ್ ಹಾಗೂ ಸಿರಾಜ್ ತಲಾ ಎರಡು ವಿಕೆಟ್, ಉಮೇಶ್ ಯಾದವ್ ಹಾಗೂ ಉನಾದ್ಕತ್ ತಲಾ ಒಂದು ವಿಕೆಟ್ ಗಳಿಸಿದರು. ಬಾಂಗ್ಲಾ ಪರ ಲಿಂಟನ್ ದಾಸ್ (73) ಹಾಗೂ ಹಸನ್ ಮಾತ್ರ ಅರ್ಧ ಶತಕ(51) ಗಡಿ ದಾಟಿದರು.
ಗೆಲ್ಲಲು 145 ಗುರಿ ಪಡೆದ ಭಾರತ ಆರಂಭದಲ್ಲಿಯೇ ಮುಗ್ಗರಿಸಿತು. ನಾಯಕ ಕೆ.ಎಲ್.ರಾಹುಲ್ (2) ತಮ್ಮ ಕಳಪೆ ಫಾರ್ಮ್ ಮುಂದುವರಿಸಿ ಶಕೀಬ್ ಅಲಿ ಹಸನ್ ಗೆ ವಿಕೆಟ್ ಒಪ್ಪಿಸಿದರು. ಆರಂಭಿಕ ದಾಂಡಿಗ ಶುಭಮನ್ ಗಿಲ್ (7), ಚೇತೇಶ್ವರ ಪೂಜಾರ (6) ವಿರಾಟ್ ಕೊಯ್ಲಿ(1) ಅತ್ಯಲ್ಪ ಮೊತ್ತಕ್ಕೆ (37/4) ಔಟಾದ ಕಾರಣ ಬಾಂಗ್ಲಾ ಗೆಲುವಿನ ಕನಸು ಕಾಣಲು ಕಾರಣರಾದರು.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಮೆಹದಿ ಹಸನ್ 8 ಓವರ್ ಬೌಲ್ ಮಾಡಿ ಕೇವಲ 12 ರನ್ ನೀಡಿ 3 ವಿಕೆಟ್ ಗಳಿಸಿದ್ದು ಭಾರತದ ಪಾಳಯದಲ್ಲಿ ಒತ್ತಡಕ್ಕೆ ಕಾರಣವಾಯಿತು. ಪ್ರಥಮ ಇನ್ನಿಂಗ್ಸ್ ನಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್(93) ಹಾಗೂ ಶ್ರೇಯಸ್ ಅಯ್ಯರ್(87) ಅವರಿಂದಾಗಿ ಇನ್ನಿಂಗ್ಸ್ ಮುನ್ನಡೆಗೆ ಕಾರಣವಾಗಿತ್ತು. ಇದೀಗ ದ್ವಿತೀಯ ಇನ್ನಿಂಗ್ಸ್ ನಲ್ಲೂ ಗೆಲುವಿನ 100 ರನ್ ಕಲೆ ಹಾಕಲು ಭಾರತ ಇವರನ್ನೇ ನೆಚ್ಚಿಕೊಂಡಿದೆ.
ದ್ವಿತೀಯ ಇನ್ನಿಂಗ್ಸ್ ನಲ್ಲಿ ಅಕ್ಷರ್ ಪಟೇಲ್ ಔಟಾಗದೆ 26 ಹಾಗೂ ಜೆ.ಉನಾದ್ಕತ್ 3 ರನ್ ಗಳೊಂದಿಗೆ ಕ್ರೀಸ್ ನಲ್ಲಿದ್ದಾರೆ. ಇನ್ನೂ ಎರಡು ದಿನಗಳ ಆಟ ಬಾಕಿ ಇದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago