ಪರ್ತ್: ಆಸ್ಟ್ರೇಲಿಯಾದ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ.
ಟೆಸ್ಟ್ ಪಂದ್ಯದಲ್ಲಿ ದಾಖಲೆಯ 295 ರನ್ಗಳಿಂದ ಭಾರತ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಭಾರತವು 150 ಅಥವಾ ಅದಕ್ಕಿಂತ ಕಡಿಮೆ ರನ್ಗಳಿಗೆ ಆಲೌಟ್ ಆಗಿದ್ದರೂ ಭಾರತದ ಹೊರಗೆ ಟೆಸ್ಟ್ ಗೆದ್ದಿರುವುದು ಇದೇ ಮೊದಲು ಎಂದು ರಜನೀಶ್ ಗುಪ್ತಾ ಮಾಹಿತಿ ಹಂಚಿಕೊಂಡಿದ್ದಾರೆ.
ನಾಯಕ ಜಸ್ಪ್ರೀತ್ ಬುಮ್ರಾ ಮೊದಲ ಇನ್ನಿಂಗ್ಸ್ನಲ್ಲಿ ಎಂಟು ವಿಕೆಟ್ಗಳನ್ನು ಕಬಳಿಸಿ ಆಸ್ಟ್ರೇಲಿಯಾವನ್ನು 104 ರನ್ಗಳಿಗೆ ಅಲೌಟ್ ಮಾಡಿದರು. ಎರಡನೇ ಇನ್ನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ 161 ಮತ್ತು ವಿರಾಟ್ ಕೊಹ್ಲಿ 100 ರನ್ಗಳ ಬ್ಯಾಟಿಂಗ್ನೊಂದಿಗೆ ಭಾರತ ಉತ್ತಮ ರನ್ ಕಲೆ ಹಾಕಿತು.
ಇನ್ನು ಮೊಹಮ್ಮದ್ ಸಿರಾಜ್ ಅವರು ಟೆಸ್ಟ್ನಲ್ಲಿ ಐದು ವಿಕೆಟ್ಗಳೊಂದಿಗೆ ಫಾರ್ಮ್ಗೆ ಮರಳಿದರು. ರಾಣಾ ಪಂದ್ಯದಲ್ಲಿ ನಾಲ್ಕು ವಿಕೆಟ್ಗಳನ್ನು ಕಬಳಿಸಿ ಸಂಭ್ರಮಿಸಿದರು.
ಇನ್ನು ಎಂಟು ವಿಕೆಟ್ ಪಡೆದ ಬೂಮ್ರಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…
ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…
ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…