ಕ್ರೀಡೆ

ಪಾಕಿಸ್ತಾನವನ್ನು 4-0 ಗೋಲುಗಳಿಂದ ಬಗ್ಗು ಬಡಿದ ಭಾರತ

ನವದೆಹಲಿ : ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಅತಿಥೇಯ ತಂಡವು ಭಾರತದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ತಮ್ಮ ಅಜೇಯ ಅಭಿಯಾನವನ್ನು ಮುಂದುವರೆಸಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಟೀಮ್ ಇಂಡಿಯಾ 4-0 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದಿದೆ. ಪ್ರಸಕ್ತ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಭಾರತಕ್ಕೆ ಇದು ನಾಲ್ಕನೇ ಗೆಲುವಾಗಿದೆ. ಟೂರ್ನಿಯಲ್ಲಿ ಹರ್ಮನ್ಪ್ರೀತ್ ಬಳಗ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ.

4-0 ಗೋಲುಗಳ ಭರ್ಜರಿ ಗೆಲುವು : ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆದರೆ ಅದೇ 4-0 ಗೋಲುಗಳಿಂದ ಸೋಲಿಸಿ ಲೀಗ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ ಆಡಿರುವ 5 ಪಂದ್ಯಗಳಲ್ಲಿ ಇದು ಎರಡನೇ ಸೋಲಾಗಿದೆ. ಒಂದು ಪಂದ್ಯವನ್ನು ಗೆದ್ದಿದ್ದರೆ ಎರಡು ಪಂದ್ಯಗಳು ಡ್ರಾಗೊಂಡಿವೆ. ಈ ಪಂದ್ಯದ ಸೋಲಿನೊಂದಿಗೆ ಸೆಮಿಫೈನಲ್ ರೇಸ್ ನಿಂದ ಪಾಕ್ ತಂಡ ಹೊರಬಿದ್ದಿದೆ.

ಮೊದಲಾರ್ಧದಲ್ಲೇ ಮುನ್ನಡೆ : ಭಾರತದ ಕ್ಯಾಪ್ಟನ್ ಮೊದಲಾರ್ಧದಲ್ಲೇ 2 ಗೋಲು ಸಿಡಿಸಿ ಮುನ್ನಡೆ ತಂದುಕೊಟ್ಟರು. ಅವರು ಪಂದ್ಯದ ಎಂಟನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸುವ ಮೂಲಕ ಹರ್ಮನ್‌ಪ್ರೀತ್ ಭಾರತಕ್ಕೆ ಆರಂಭಿಕ ಮುನ್ನಡೆ ದೊರಕಿಸಿಕೊಟ್ಟರು. ಎರಡನೇ ಕ್ವಾರ್ಟರ್‌ನಲ್ಲಿ ಉಭಯ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. 23ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಪೆನಾಲ್ಟಿಯಲ್ಲಿ ಮತ್ತೊಮ್ಮೆ ಗೋಲು ಗಳಿಸುವ ಮೂಲಕ ಭಾರತದ ಮುನ್ನಡೆಯನ್ನು ದ್ವಿಗುಣಗೊಳಿಸಿದರು. ಮೊದಲಾರ್ಧದವರೆಗೂ ಭಾರತ 2-0 ಮುನ್ನಡೆಯಲ್ಲಿತ್ತು.

ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ : ತೃತೀಯಾರ್ಧದಲ್ಲಿ ಗುರ್ಜನ್ ಸಿಂಗ್ ಪೆನಾಲ್ಟಿಯನ್ನು ಭಾರತಕ್ಕೆ ಗೋಲಾಗಿ ಪರಿವರ್ತಿಸಿ ಭಾರತದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು. ಮಂದೀಪ್ ಸಿಂಗ್ ಭಾರತಕ್ಕೆ ನಾಲ್ಕನೇ ಗೋಲು ಸಿಡಿಸಿ ಗೆಲುವಿನ ಅಂತರವನ್ನು 4-0ಗೆ ಹೆಚ್ಚಿಸಿದರು.

ಏಷ್ಯನ್ ಚಾಂಪಿಯನ್ ಟ್ರೋಫಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದ್ದವು. ಸಾಂಪ್ರದಾಯಿಕ ಎದುರಾಳಿಗಳು ಇಲ್ಲಿಯವರೆಗೆ ತಲಾ 3 ಪ್ರಶಸ್ತಿಗಳನ್ನು ಗೆದ್ದಿವೆ.

lokesh

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

1 hour ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

5 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

6 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

7 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

7 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

8 hours ago