ನವದೆಹಲಿ : ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಅತಿಥೇಯ ತಂಡವು ಭಾರತದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ತಮ್ಮ ಅಜೇಯ ಅಭಿಯಾನವನ್ನು ಮುಂದುವರೆಸಿದೆ. ನಾಯಕ ಹರ್ಮನ್ಪ್ರೀತ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಟೀಮ್ ಇಂಡಿಯಾ 4-0 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದಿದೆ. ಪ್ರಸಕ್ತ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಭಾರತಕ್ಕೆ ಇದು ನಾಲ್ಕನೇ ಗೆಲುವಾಗಿದೆ. ಟೂರ್ನಿಯಲ್ಲಿ ಹರ್ಮನ್ಪ್ರೀತ್ ಬಳಗ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ.
4-0 ಗೋಲುಗಳ ಭರ್ಜರಿ ಗೆಲುವು : ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆದರೆ ಅದೇ 4-0 ಗೋಲುಗಳಿಂದ ಸೋಲಿಸಿ ಲೀಗ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ ಆಡಿರುವ 5 ಪಂದ್ಯಗಳಲ್ಲಿ ಇದು ಎರಡನೇ ಸೋಲಾಗಿದೆ. ಒಂದು ಪಂದ್ಯವನ್ನು ಗೆದ್ದಿದ್ದರೆ ಎರಡು ಪಂದ್ಯಗಳು ಡ್ರಾಗೊಂಡಿವೆ. ಈ ಪಂದ್ಯದ ಸೋಲಿನೊಂದಿಗೆ ಸೆಮಿಫೈನಲ್ ರೇಸ್ ನಿಂದ ಪಾಕ್ ತಂಡ ಹೊರಬಿದ್ದಿದೆ.
ಮೊದಲಾರ್ಧದಲ್ಲೇ ಮುನ್ನಡೆ : ಭಾರತದ ಕ್ಯಾಪ್ಟನ್ ಮೊದಲಾರ್ಧದಲ್ಲೇ 2 ಗೋಲು ಸಿಡಿಸಿ ಮುನ್ನಡೆ ತಂದುಕೊಟ್ಟರು. ಅವರು ಪಂದ್ಯದ ಎಂಟನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸುವ ಮೂಲಕ ಹರ್ಮನ್ಪ್ರೀತ್ ಭಾರತಕ್ಕೆ ಆರಂಭಿಕ ಮುನ್ನಡೆ ದೊರಕಿಸಿಕೊಟ್ಟರು. ಎರಡನೇ ಕ್ವಾರ್ಟರ್ನಲ್ಲಿ ಉಭಯ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. 23ನೇ ನಿಮಿಷದಲ್ಲಿ ಹರ್ಮನ್ಪ್ರೀತ್ ಪೆನಾಲ್ಟಿಯಲ್ಲಿ ಮತ್ತೊಮ್ಮೆ ಗೋಲು ಗಳಿಸುವ ಮೂಲಕ ಭಾರತದ ಮುನ್ನಡೆಯನ್ನು ದ್ವಿಗುಣಗೊಳಿಸಿದರು. ಮೊದಲಾರ್ಧದವರೆಗೂ ಭಾರತ 2-0 ಮುನ್ನಡೆಯಲ್ಲಿತ್ತು.
ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ : ತೃತೀಯಾರ್ಧದಲ್ಲಿ ಗುರ್ಜನ್ ಸಿಂಗ್ ಪೆನಾಲ್ಟಿಯನ್ನು ಭಾರತಕ್ಕೆ ಗೋಲಾಗಿ ಪರಿವರ್ತಿಸಿ ಭಾರತದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು. ಮಂದೀಪ್ ಸಿಂಗ್ ಭಾರತಕ್ಕೆ ನಾಲ್ಕನೇ ಗೋಲು ಸಿಡಿಸಿ ಗೆಲುವಿನ ಅಂತರವನ್ನು 4-0ಗೆ ಹೆಚ್ಚಿಸಿದರು.
ಏಷ್ಯನ್ ಚಾಂಪಿಯನ್ ಟ್ರೋಫಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದ್ದವು. ಸಾಂಪ್ರದಾಯಿಕ ಎದುರಾಳಿಗಳು ಇಲ್ಲಿಯವರೆಗೆ ತಲಾ 3 ಪ್ರಶಸ್ತಿಗಳನ್ನು ಗೆದ್ದಿವೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…