ಕ್ರೀಡೆ

ಪಾಕಿಸ್ತಾನವನ್ನು 4-0 ಗೋಲುಗಳಿಂದ ಬಗ್ಗು ಬಡಿದ ಭಾರತ

ನವದೆಹಲಿ : ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಅತಿಥೇಯ ತಂಡವು ಭಾರತದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ತಮ್ಮ ಅಜೇಯ ಅಭಿಯಾನವನ್ನು ಮುಂದುವರೆಸಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಟೀಮ್ ಇಂಡಿಯಾ 4-0 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದಿದೆ. ಪ್ರಸಕ್ತ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಭಾರತಕ್ಕೆ ಇದು ನಾಲ್ಕನೇ ಗೆಲುವಾಗಿದೆ. ಟೂರ್ನಿಯಲ್ಲಿ ಹರ್ಮನ್ಪ್ರೀತ್ ಬಳಗ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ.

4-0 ಗೋಲುಗಳ ಭರ್ಜರಿ ಗೆಲುವು : ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆದರೆ ಅದೇ 4-0 ಗೋಲುಗಳಿಂದ ಸೋಲಿಸಿ ಲೀಗ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ ಆಡಿರುವ 5 ಪಂದ್ಯಗಳಲ್ಲಿ ಇದು ಎರಡನೇ ಸೋಲಾಗಿದೆ. ಒಂದು ಪಂದ್ಯವನ್ನು ಗೆದ್ದಿದ್ದರೆ ಎರಡು ಪಂದ್ಯಗಳು ಡ್ರಾಗೊಂಡಿವೆ. ಈ ಪಂದ್ಯದ ಸೋಲಿನೊಂದಿಗೆ ಸೆಮಿಫೈನಲ್ ರೇಸ್ ನಿಂದ ಪಾಕ್ ತಂಡ ಹೊರಬಿದ್ದಿದೆ.

ಮೊದಲಾರ್ಧದಲ್ಲೇ ಮುನ್ನಡೆ : ಭಾರತದ ಕ್ಯಾಪ್ಟನ್ ಮೊದಲಾರ್ಧದಲ್ಲೇ 2 ಗೋಲು ಸಿಡಿಸಿ ಮುನ್ನಡೆ ತಂದುಕೊಟ್ಟರು. ಅವರು ಪಂದ್ಯದ ಎಂಟನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸುವ ಮೂಲಕ ಹರ್ಮನ್‌ಪ್ರೀತ್ ಭಾರತಕ್ಕೆ ಆರಂಭಿಕ ಮುನ್ನಡೆ ದೊರಕಿಸಿಕೊಟ್ಟರು. ಎರಡನೇ ಕ್ವಾರ್ಟರ್‌ನಲ್ಲಿ ಉಭಯ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. 23ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಪೆನಾಲ್ಟಿಯಲ್ಲಿ ಮತ್ತೊಮ್ಮೆ ಗೋಲು ಗಳಿಸುವ ಮೂಲಕ ಭಾರತದ ಮುನ್ನಡೆಯನ್ನು ದ್ವಿಗುಣಗೊಳಿಸಿದರು. ಮೊದಲಾರ್ಧದವರೆಗೂ ಭಾರತ 2-0 ಮುನ್ನಡೆಯಲ್ಲಿತ್ತು.

ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ : ತೃತೀಯಾರ್ಧದಲ್ಲಿ ಗುರ್ಜನ್ ಸಿಂಗ್ ಪೆನಾಲ್ಟಿಯನ್ನು ಭಾರತಕ್ಕೆ ಗೋಲಾಗಿ ಪರಿವರ್ತಿಸಿ ಭಾರತದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು. ಮಂದೀಪ್ ಸಿಂಗ್ ಭಾರತಕ್ಕೆ ನಾಲ್ಕನೇ ಗೋಲು ಸಿಡಿಸಿ ಗೆಲುವಿನ ಅಂತರವನ್ನು 4-0ಗೆ ಹೆಚ್ಚಿಸಿದರು.

ಏಷ್ಯನ್ ಚಾಂಪಿಯನ್ ಟ್ರೋಫಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದ್ದವು. ಸಾಂಪ್ರದಾಯಿಕ ಎದುರಾಳಿಗಳು ಇಲ್ಲಿಯವರೆಗೆ ತಲಾ 3 ಪ್ರಶಸ್ತಿಗಳನ್ನು ಗೆದ್ದಿವೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

20 mins ago

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

14 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

14 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

14 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

15 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

16 hours ago