ಕ್ರೀಡೆ

ಪಾಕಿಸ್ತಾನವನ್ನು 4-0 ಗೋಲುಗಳಿಂದ ಬಗ್ಗು ಬಡಿದ ಭಾರತ

ನವದೆಹಲಿ : ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಅತಿಥೇಯ ತಂಡವು ಭಾರತದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ತಮ್ಮ ಅಜೇಯ ಅಭಿಯಾನವನ್ನು ಮುಂದುವರೆಸಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಟೀಮ್ ಇಂಡಿಯಾ 4-0 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದಿದೆ. ಪ್ರಸಕ್ತ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಭಾರತಕ್ಕೆ ಇದು ನಾಲ್ಕನೇ ಗೆಲುವಾಗಿದೆ. ಟೂರ್ನಿಯಲ್ಲಿ ಹರ್ಮನ್ಪ್ರೀತ್ ಬಳಗ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ.

4-0 ಗೋಲುಗಳ ಭರ್ಜರಿ ಗೆಲುವು : ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆದರೆ ಅದೇ 4-0 ಗೋಲುಗಳಿಂದ ಸೋಲಿಸಿ ಲೀಗ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ ಆಡಿರುವ 5 ಪಂದ್ಯಗಳಲ್ಲಿ ಇದು ಎರಡನೇ ಸೋಲಾಗಿದೆ. ಒಂದು ಪಂದ್ಯವನ್ನು ಗೆದ್ದಿದ್ದರೆ ಎರಡು ಪಂದ್ಯಗಳು ಡ್ರಾಗೊಂಡಿವೆ. ಈ ಪಂದ್ಯದ ಸೋಲಿನೊಂದಿಗೆ ಸೆಮಿಫೈನಲ್ ರೇಸ್ ನಿಂದ ಪಾಕ್ ತಂಡ ಹೊರಬಿದ್ದಿದೆ.

ಮೊದಲಾರ್ಧದಲ್ಲೇ ಮುನ್ನಡೆ : ಭಾರತದ ಕ್ಯಾಪ್ಟನ್ ಮೊದಲಾರ್ಧದಲ್ಲೇ 2 ಗೋಲು ಸಿಡಿಸಿ ಮುನ್ನಡೆ ತಂದುಕೊಟ್ಟರು. ಅವರು ಪಂದ್ಯದ ಎಂಟನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸುವ ಮೂಲಕ ಹರ್ಮನ್‌ಪ್ರೀತ್ ಭಾರತಕ್ಕೆ ಆರಂಭಿಕ ಮುನ್ನಡೆ ದೊರಕಿಸಿಕೊಟ್ಟರು. ಎರಡನೇ ಕ್ವಾರ್ಟರ್‌ನಲ್ಲಿ ಉಭಯ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. 23ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಪೆನಾಲ್ಟಿಯಲ್ಲಿ ಮತ್ತೊಮ್ಮೆ ಗೋಲು ಗಳಿಸುವ ಮೂಲಕ ಭಾರತದ ಮುನ್ನಡೆಯನ್ನು ದ್ವಿಗುಣಗೊಳಿಸಿದರು. ಮೊದಲಾರ್ಧದವರೆಗೂ ಭಾರತ 2-0 ಮುನ್ನಡೆಯಲ್ಲಿತ್ತು.

ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ : ತೃತೀಯಾರ್ಧದಲ್ಲಿ ಗುರ್ಜನ್ ಸಿಂಗ್ ಪೆನಾಲ್ಟಿಯನ್ನು ಭಾರತಕ್ಕೆ ಗೋಲಾಗಿ ಪರಿವರ್ತಿಸಿ ಭಾರತದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು. ಮಂದೀಪ್ ಸಿಂಗ್ ಭಾರತಕ್ಕೆ ನಾಲ್ಕನೇ ಗೋಲು ಸಿಡಿಸಿ ಗೆಲುವಿನ ಅಂತರವನ್ನು 4-0ಗೆ ಹೆಚ್ಚಿಸಿದರು.

ಏಷ್ಯನ್ ಚಾಂಪಿಯನ್ ಟ್ರೋಫಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದ್ದವು. ಸಾಂಪ್ರದಾಯಿಕ ಎದುರಾಳಿಗಳು ಇಲ್ಲಿಯವರೆಗೆ ತಲಾ 3 ಪ್ರಶಸ್ತಿಗಳನ್ನು ಗೆದ್ದಿವೆ.

lokesh

Recent Posts

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

5 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

21 mins ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

37 mins ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

52 mins ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

1 hour ago

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್‌ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…

1 hour ago