ಕ್ರೀಡೆ

ಪಾಕಿಸ್ತಾನವನ್ನು 4-0 ಗೋಲುಗಳಿಂದ ಬಗ್ಗು ಬಡಿದ ಭಾರತ

ನವದೆಹಲಿ : ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಅತಿಥೇಯ ತಂಡವು ಭಾರತದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ತಮ್ಮ ಅಜೇಯ ಅಭಿಯಾನವನ್ನು ಮುಂದುವರೆಸಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಎರಡು ಗೋಲುಗಳ ನೆರವಿನಿಂದ ಟೀಮ್ ಇಂಡಿಯಾ 4-0 ಗೋಲುಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದಿದೆ. ಪ್ರಸಕ್ತ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಭಾರತಕ್ಕೆ ಇದು ನಾಲ್ಕನೇ ಗೆಲುವಾಗಿದೆ. ಟೂರ್ನಿಯಲ್ಲಿ ಹರ್ಮನ್ಪ್ರೀತ್ ಬಳಗ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ.

4-0 ಗೋಲುಗಳ ಭರ್ಜರಿ ಗೆಲುವು : ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆದರೆ ಅದೇ 4-0 ಗೋಲುಗಳಿಂದ ಸೋಲಿಸಿ ಲೀಗ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ ಆಡಿರುವ 5 ಪಂದ್ಯಗಳಲ್ಲಿ ಇದು ಎರಡನೇ ಸೋಲಾಗಿದೆ. ಒಂದು ಪಂದ್ಯವನ್ನು ಗೆದ್ದಿದ್ದರೆ ಎರಡು ಪಂದ್ಯಗಳು ಡ್ರಾಗೊಂಡಿವೆ. ಈ ಪಂದ್ಯದ ಸೋಲಿನೊಂದಿಗೆ ಸೆಮಿಫೈನಲ್ ರೇಸ್ ನಿಂದ ಪಾಕ್ ತಂಡ ಹೊರಬಿದ್ದಿದೆ.

ಮೊದಲಾರ್ಧದಲ್ಲೇ ಮುನ್ನಡೆ : ಭಾರತದ ಕ್ಯಾಪ್ಟನ್ ಮೊದಲಾರ್ಧದಲ್ಲೇ 2 ಗೋಲು ಸಿಡಿಸಿ ಮುನ್ನಡೆ ತಂದುಕೊಟ್ಟರು. ಅವರು ಪಂದ್ಯದ ಎಂಟನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸುವ ಮೂಲಕ ಹರ್ಮನ್‌ಪ್ರೀತ್ ಭಾರತಕ್ಕೆ ಆರಂಭಿಕ ಮುನ್ನಡೆ ದೊರಕಿಸಿಕೊಟ್ಟರು. ಎರಡನೇ ಕ್ವಾರ್ಟರ್‌ನಲ್ಲಿ ಉಭಯ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. 23ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಪೆನಾಲ್ಟಿಯಲ್ಲಿ ಮತ್ತೊಮ್ಮೆ ಗೋಲು ಗಳಿಸುವ ಮೂಲಕ ಭಾರತದ ಮುನ್ನಡೆಯನ್ನು ದ್ವಿಗುಣಗೊಳಿಸಿದರು. ಮೊದಲಾರ್ಧದವರೆಗೂ ಭಾರತ 2-0 ಮುನ್ನಡೆಯಲ್ಲಿತ್ತು.

ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ : ತೃತೀಯಾರ್ಧದಲ್ಲಿ ಗುರ್ಜನ್ ಸಿಂಗ್ ಪೆನಾಲ್ಟಿಯನ್ನು ಭಾರತಕ್ಕೆ ಗೋಲಾಗಿ ಪರಿವರ್ತಿಸಿ ಭಾರತದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು. ಮಂದೀಪ್ ಸಿಂಗ್ ಭಾರತಕ್ಕೆ ನಾಲ್ಕನೇ ಗೋಲು ಸಿಡಿಸಿ ಗೆಲುವಿನ ಅಂತರವನ್ನು 4-0ಗೆ ಹೆಚ್ಚಿಸಿದರು.

ಏಷ್ಯನ್ ಚಾಂಪಿಯನ್ ಟ್ರೋಫಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದ್ದವು. ಸಾಂಪ್ರದಾಯಿಕ ಎದುರಾಳಿಗಳು ಇಲ್ಲಿಯವರೆಗೆ ತಲಾ 3 ಪ್ರಶಸ್ತಿಗಳನ್ನು ಗೆದ್ದಿವೆ.

lokesh

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

8 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

20 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

20 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

20 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

20 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

20 hours ago