ಕ್ರೀಡೆ

ಭಾರತ vs ಬಾಂಗ್ಲಾದೇಶ ಪ್ರಥಮ ಟಿ20: ಭಾರತಕ್ಕೆ ಭರ್ಜರಿ ಜಯ

ಗ್ವಾಲಿಯರ್:‌ ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆರಿಸಿಕೊಂಡು ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಬಾಂಗ್ಲಾದೇಶ 19.5 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್‌ ಆಗಿ ಭಾರತಕ್ಕೆ 128 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 11.5 ಓವರ್‌ಗಳಲ್ಲಿ ಬೆನ್ನಟ್ಟಿದ ಟೀಮ್‌ ಇಂಡಿಯಾ 132 ರನ್‌ ದಾಖಲಿಸಿತು.

ಬಾಂಗ್ಲಾ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪರ್ವೈಜ್‌ ಹೊಸೈನ್‌ 8 ರನ್‌ ಮತ್ತು ಲಿಟನ್‌ ದಾಸ್‌ 4 ರನ್‌ ಗಳಿಸಿದರು. ಇನ್ನುಳಿದಂತೆ ತೌಹಿದ್‌ ಹೃದೊಯ್‌ 12, ಮಹ್ಮದ್ದುಲ್ಲಾ 1, ಜಾಕೀರ್‌ ಅಲಿ 8, ನಾಯಕ ನಜ್ಮುಲ್‌ ಹೊಸೈನ್‌ ಶಾಂತೊ 27, ರಿಷದ್‌ ಹೊಸೈನ್‌ 11, ಟಸ್ಕಿನ್‌ ಅಹ್ಮದ್‌ 12, ಶೊರಿಫುಲ್‌ ಇಸ್ಲಾಂ 0, ಮುಸ್ತಫಿಜರ್‌ ರಹಮಾನ್‌ 1 ಮತ್ತು ಮೆಹಿಡಿ ಹಸನ್‌ ಅಜೇಯ 35 ರನ್ ಗಳಿಸಿದರು.

ಭಾರತದ ಪರ ಅರ್ಷ್‌ದೀಪ್‌ ಸಿಂಗ್‌ ಹಾಗೂ ವರುಣ್‌ ಚಕ್ರವರ್ತಿ ತಲಾ 3 ವಿಕೆಟ್‌, ಮಯಾಂಕ್‌ ಯಾದವ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತ ಇನ್ನಿಂಗ್ಸ್:‌ ಬಾಂಗ್ಲಾ ನೀಡಿದ ಸರಳ ಗುರಿಯನ್ನು ಬೆನ್ನಟ್ಟಿದ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್‌ 29 (19) ರನ್‌ ಮತ್ತು ಅಭಿಷೇಕ್‌ ಶರ್ಮಾ 16 (7) ರನ್‌ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್‌ ಯಾದವ್‌ 29 (14) ರನ್‌, ನಿತೀಶ್‌ ರೆಡ್ಡಿ ಅಜೇಯ 16 (15) ರನ್‌ ಮತ್ತು ಹಾರ್ದಿಕ್‌ ಪಾಂಡ್ಯ ಅಜೇಯ 39 (16) ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಬಾಂಗ್ಲಾ ಪರ ಮುಸ್ತಫಿಜರ್‌ ರಹಮಾನ್‌ ಹಾಗೂ ಮೆಹಿಡಿ ಹಸನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

 

 

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

2 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

4 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

5 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

5 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

5 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

5 hours ago