ಕ್ರೀಡೆ

ಭಾರತ vs ಬಾಂಗ್ಲಾದೇಶ ಪ್ರಥಮ ಟಿ20: ಭಾರತಕ್ಕೆ ಭರ್ಜರಿ ಜಯ

ಗ್ವಾಲಿಯರ್:‌ ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆರಿಸಿಕೊಂಡು ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಬಾಂಗ್ಲಾದೇಶ 19.5 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್‌ ಆಗಿ ಭಾರತಕ್ಕೆ 128 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 11.5 ಓವರ್‌ಗಳಲ್ಲಿ ಬೆನ್ನಟ್ಟಿದ ಟೀಮ್‌ ಇಂಡಿಯಾ 132 ರನ್‌ ದಾಖಲಿಸಿತು.

ಬಾಂಗ್ಲಾ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪರ್ವೈಜ್‌ ಹೊಸೈನ್‌ 8 ರನ್‌ ಮತ್ತು ಲಿಟನ್‌ ದಾಸ್‌ 4 ರನ್‌ ಗಳಿಸಿದರು. ಇನ್ನುಳಿದಂತೆ ತೌಹಿದ್‌ ಹೃದೊಯ್‌ 12, ಮಹ್ಮದ್ದುಲ್ಲಾ 1, ಜಾಕೀರ್‌ ಅಲಿ 8, ನಾಯಕ ನಜ್ಮುಲ್‌ ಹೊಸೈನ್‌ ಶಾಂತೊ 27, ರಿಷದ್‌ ಹೊಸೈನ್‌ 11, ಟಸ್ಕಿನ್‌ ಅಹ್ಮದ್‌ 12, ಶೊರಿಫುಲ್‌ ಇಸ್ಲಾಂ 0, ಮುಸ್ತಫಿಜರ್‌ ರಹಮಾನ್‌ 1 ಮತ್ತು ಮೆಹಿಡಿ ಹಸನ್‌ ಅಜೇಯ 35 ರನ್ ಗಳಿಸಿದರು.

ಭಾರತದ ಪರ ಅರ್ಷ್‌ದೀಪ್‌ ಸಿಂಗ್‌ ಹಾಗೂ ವರುಣ್‌ ಚಕ್ರವರ್ತಿ ತಲಾ 3 ವಿಕೆಟ್‌, ಮಯಾಂಕ್‌ ಯಾದವ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತ ಇನ್ನಿಂಗ್ಸ್:‌ ಬಾಂಗ್ಲಾ ನೀಡಿದ ಸರಳ ಗುರಿಯನ್ನು ಬೆನ್ನಟ್ಟಿದ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್‌ 29 (19) ರನ್‌ ಮತ್ತು ಅಭಿಷೇಕ್‌ ಶರ್ಮಾ 16 (7) ರನ್‌ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್‌ ಯಾದವ್‌ 29 (14) ರನ್‌, ನಿತೀಶ್‌ ರೆಡ್ಡಿ ಅಜೇಯ 16 (15) ರನ್‌ ಮತ್ತು ಹಾರ್ದಿಕ್‌ ಪಾಂಡ್ಯ ಅಜೇಯ 39 (16) ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಬಾಂಗ್ಲಾ ಪರ ಮುಸ್ತಫಿಜರ್‌ ರಹಮಾನ್‌ ಹಾಗೂ ಮೆಹಿಡಿ ಹಸನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

 

 

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

1 second ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

28 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago