ಗ್ವಾಲಿಯರ್: ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡು ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಬಾಂಗ್ಲಾದೇಶ 19.5 ಓವರ್ಗಳಲ್ಲಿ 127 ರನ್ಗಳಿಗೆ ಆಲ್ಔಟ್ ಆಗಿ ಭಾರತಕ್ಕೆ 128 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 11.5 ಓವರ್ಗಳಲ್ಲಿ ಬೆನ್ನಟ್ಟಿದ ಟೀಮ್ ಇಂಡಿಯಾ 132 ರನ್ ದಾಖಲಿಸಿತು.
ಬಾಂಗ್ಲಾ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪರ್ವೈಜ್ ಹೊಸೈನ್ 8 ರನ್ ಮತ್ತು ಲಿಟನ್ ದಾಸ್ 4 ರನ್ ಗಳಿಸಿದರು. ಇನ್ನುಳಿದಂತೆ ತೌಹಿದ್ ಹೃದೊಯ್ 12, ಮಹ್ಮದ್ದುಲ್ಲಾ 1, ಜಾಕೀರ್ ಅಲಿ 8, ನಾಯಕ ನಜ್ಮುಲ್ ಹೊಸೈನ್ ಶಾಂತೊ 27, ರಿಷದ್ ಹೊಸೈನ್ 11, ಟಸ್ಕಿನ್ ಅಹ್ಮದ್ 12, ಶೊರಿಫುಲ್ ಇಸ್ಲಾಂ 0, ಮುಸ್ತಫಿಜರ್ ರಹಮಾನ್ 1 ಮತ್ತು ಮೆಹಿಡಿ ಹಸನ್ ಅಜೇಯ 35 ರನ್ ಗಳಿಸಿದರು.
ಭಾರತದ ಪರ ಅರ್ಷ್ದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್, ಮಯಾಂಕ್ ಯಾದವ್, ವಾಷಿಂಗ್ಟನ್ ಸುಂದರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತ ಇನ್ನಿಂಗ್ಸ್: ಬಾಂಗ್ಲಾ ನೀಡಿದ ಸರಳ ಗುರಿಯನ್ನು ಬೆನ್ನಟ್ಟಿದ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 29 (19) ರನ್ ಮತ್ತು ಅಭಿಷೇಕ್ ಶರ್ಮಾ 16 (7) ರನ್ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್ ಯಾದವ್ 29 (14) ರನ್, ನಿತೀಶ್ ರೆಡ್ಡಿ ಅಜೇಯ 16 (15) ರನ್ ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 39 (16) ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಬಾಂಗ್ಲಾ ಪರ ಮುಸ್ತಫಿಜರ್ ರಹಮಾನ್ ಹಾಗೂ ಮೆಹಿಡಿ ಹಸನ್ ತಲಾ ಒಂದೊಂದು ವಿಕೆಟ್ ಪಡೆದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…