ಗ್ವಾಲಿಯರ್: ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡು ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಬಾಂಗ್ಲಾದೇಶ 19.5 ಓವರ್ಗಳಲ್ಲಿ 127 ರನ್ಗಳಿಗೆ ಆಲ್ಔಟ್ ಆಗಿ ಭಾರತಕ್ಕೆ 128 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 11.5 ಓವರ್ಗಳಲ್ಲಿ ಬೆನ್ನಟ್ಟಿದ ಟೀಮ್ ಇಂಡಿಯಾ 132 ರನ್ ದಾಖಲಿಸಿತು.
ಬಾಂಗ್ಲಾ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪರ್ವೈಜ್ ಹೊಸೈನ್ 8 ರನ್ ಮತ್ತು ಲಿಟನ್ ದಾಸ್ 4 ರನ್ ಗಳಿಸಿದರು. ಇನ್ನುಳಿದಂತೆ ತೌಹಿದ್ ಹೃದೊಯ್ 12, ಮಹ್ಮದ್ದುಲ್ಲಾ 1, ಜಾಕೀರ್ ಅಲಿ 8, ನಾಯಕ ನಜ್ಮುಲ್ ಹೊಸೈನ್ ಶಾಂತೊ 27, ರಿಷದ್ ಹೊಸೈನ್ 11, ಟಸ್ಕಿನ್ ಅಹ್ಮದ್ 12, ಶೊರಿಫುಲ್ ಇಸ್ಲಾಂ 0, ಮುಸ್ತಫಿಜರ್ ರಹಮಾನ್ 1 ಮತ್ತು ಮೆಹಿಡಿ ಹಸನ್ ಅಜೇಯ 35 ರನ್ ಗಳಿಸಿದರು.
ಭಾರತದ ಪರ ಅರ್ಷ್ದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್, ಮಯಾಂಕ್ ಯಾದವ್, ವಾಷಿಂಗ್ಟನ್ ಸುಂದರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತ ಇನ್ನಿಂಗ್ಸ್: ಬಾಂಗ್ಲಾ ನೀಡಿದ ಸರಳ ಗುರಿಯನ್ನು ಬೆನ್ನಟ್ಟಿದ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 29 (19) ರನ್ ಮತ್ತು ಅಭಿಷೇಕ್ ಶರ್ಮಾ 16 (7) ರನ್ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್ ಯಾದವ್ 29 (14) ರನ್, ನಿತೀಶ್ ರೆಡ್ಡಿ ಅಜೇಯ 16 (15) ರನ್ ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 39 (16) ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಬಾಂಗ್ಲಾ ಪರ ಮುಸ್ತಫಿಜರ್ ರಹಮಾನ್ ಹಾಗೂ ಮೆಹಿಡಿ ಹಸನ್ ತಲಾ ಒಂದೊಂದು ವಿಕೆಟ್ ಪಡೆದರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…