ನವದೆಹಲಿ : ಈ ಬಾರಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಮೇಲಿರುವ ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಲಿದ್ದೇವೆಂದು ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಕಗಿಸೊ ರಬಾಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 5 ರಿಂದ ನವೆಂಬರ್ 19ರವರೆಗೆ ಭಾರತದ ಆತಿಥ್ಯದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಭಾರತಕ್ಕೆ ಆಗಮಿಸಿವೆ. ಅದರಂತೆ ತೆಂಬಾ ಬವೂಮ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಕೂಡ ಭಾರತಕ್ಕೆ ಆಗಮಿಸಿದೆ. ಮಹತ್ವದ ಟೂರ್ನಿಯ ಸಲುವಾಗಿ ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ, ಈ ಬಾರಿ ನಾವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುತ್ತೇವೆಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗ್ರೇಮ್ ಸ್ಮಿತ್, ಹಾಶಿಮ್ ಆಮ್ಲಾ, ಎಬಿ ಡಿ ವಿಲಿಯರ್ಸ್, ಫಾಫ್ ಡು ಪ್ಲೆಸಿಸ್ ಸೇರಿದಂತೆ ಘಟಾನುಘಟಿ ಆಟಗಾರರು ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದರೂ ಒಂದೇ ಒಂದು ಬಾರಿ ಕೂಡ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಚೋಕರ್ಸ್ ಎಂದು ಕರೆಯಲಾಗುತ್ತದೆ.
ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ,” ದಕ್ಷಿಣ ಆಫ್ರಿಕಾದವರಿಗೆ ಎಂದಿಗೂ ನಂಬಿಕೆಯ ಕೊರತೆ ಇರುವುದಿಲ್ಲ. ಈ ಬಾರಿ ಏಕದಿನ ವಿಶ್ವಕಪ್ ಗೆಲ್ಲುವ ವಿಶ್ವಾಸದೊಂದಿಗೆ ನಾವು ಟೂರ್ನಿಗೆ ತೆರಳುತ್ತಿದ್ದೇವೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನಮ್ಮ ತಂಡ ಅತ್ಯುತ್ತಮ ಆಟಗಾರರೊಂದಿಗೆ ಬಲಿಷ್ಠವಾಗಿದೆ. ಆದ್ದರಿಂದ ನಾವು ಈ ಬಾರಿ ಮೊದಲ ಬಾರಿ ಫೈನಲ್ಗೆ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದೇವೆ. ಈ ಹಾದಿ ಕಠಿಣವಾಗಿದ್ದರೂ, ಇದನ್ನು ನಾವು ಆನಂದಿಸುತ್ತೇವೆ. ಒಂದು ಪ್ರಶಸ್ತಿಗೆ ವಿಶ್ವದ ಅತ್ಯುತ್ತಮ ಆಟಗಾರರ ವಿರುದ್ಧ ಕಾದಾಟ ನಡೆಸುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ನಾವು ಸವಾಲನ್ನು ಸ್ವೀಕರಿಸುತ್ತೇವೆ,” ಎಂದು ಕಗಿಸೊ ರಬಾಡ ತಿಳಿಸಿದ್ದಾರೆ.
2019ರಲ್ಲಿ ವಿಫಲವಾಗಿದ್ದ ದಕ್ಷಿಣ ಆಫ್ರಿಕಾ ತಂಡ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನಾಲ್ಕು ಬಾರಿ ಸೆಮಿಫೈನಲ್ ತಲುಪಿರುವ ದಕ್ಷಿಣ ಆಫ್ರಿಕಾ ತಂಡ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತಂದಿಂದಲೇ ಹೊರ ಬಿದ್ದಿತ್ತು. ಪ್ರಸ್ತುತ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ತಂಡದ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ 3-2 ಅಂತರದಲ್ಲಿ ಏಕದಿನ ಸರಣಿಯನ್ನು ಮುಡಿಗೇರಿಸಿಕೊಂಡಿತ್ತು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…