ಕ್ರೀಡೆ

ಭಾರತದಲ್ಲಿ ವರ್ಲ್ಡ್‌ಕಪ್‌ ಗೆಲ್ಲುತ್ತೇವೆಂಬ ವಿಶ್ವಾಸವಿದೆ: ಕಗಿಸೊ ರಬಾಡ

ನವದೆಹಲಿ : ಈ ಬಾರಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಮೇಲಿರುವ ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಲಿದ್ದೇವೆಂದು ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಕಗಿಸೊ ರಬಾಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್‌ 5 ರಿಂದ ನವೆಂಬರ್ 19ರವರೆಗೆ ಭಾರತದ ಆತಿಥ್ಯದಲ್ಲಿ 2023ರ ಏಕದಿನ ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಭಾರತಕ್ಕೆ ಆಗಮಿಸಿವೆ. ಅದರಂತೆ ತೆಂಬಾ ಬವೂಮ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಕೂಡ ಭಾರತಕ್ಕೆ ಆಗಮಿಸಿದೆ. ಮಹತ್ವದ ಟೂರ್ನಿಯ ಸಲುವಾಗಿ ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ, ಈ ಬಾರಿ ನಾವು ಚೊಚ್ಚಲ ಏಕದಿನ ವಿಶ್ವಕಪ್‌ ಗೆಲ್ಲುತ್ತೇವೆಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗ್ರೇಮ್ ಸ್ಮಿತ್‌, ಹಾಶಿಮ್‌ ಆಮ್ಲಾ, ಎಬಿ ಡಿ ವಿಲಿಯರ್ಸ್, ಫಾಫ್‌ ಡು ಪ್ಲೆಸಿಸ್‌ ಸೇರಿದಂತೆ ಘಟಾನುಘಟಿ ಆಟಗಾರರು ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದರೂ ಒಂದೇ ಒಂದು ಬಾರಿ ಕೂಡ ವಿಶ್ವಕಪ್‌ ಗೆಲ್ಲಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಚೋಕರ್ಸ್ ಎಂದು ಕರೆಯಲಾಗುತ್ತದೆ.

ಈ ಬಾರಿ ಚೊಚ್ಚಲ ಪ್ರಶಸ್ತಿ ಗೆಲ್ಲುತ್ತೇವೆಂಬ ಬಗ್ಗೆ ವಿಶ್ವಾಸವಿದೆ: ರಬಾಡ

ಐಸಿಸಿ ಜೊತೆ ಮಾತನಾಡಿದ ಕಗಿಸೊ ರಬಾಡ,” ದಕ್ಷಿಣ ಆಫ್ರಿಕಾದವರಿಗೆ ಎಂದಿಗೂ ನಂಬಿಕೆಯ ಕೊರತೆ ಇರುವುದಿಲ್ಲ. ಈ ಬಾರಿ ಏಕದಿನ ವಿಶ್ವಕಪ್‌ ಗೆಲ್ಲುವ ವಿಶ್ವಾಸದೊಂದಿಗೆ ನಾವು ಟೂರ್ನಿಗೆ ತೆರಳುತ್ತಿದ್ದೇವೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಮ್ಮ ತಂಡ ಅತ್ಯುತ್ತಮ ಆಟಗಾರರೊಂದಿಗೆ ಬಲಿಷ್ಠವಾಗಿದೆ. ಆದ್ದರಿಂದ ನಾವು ಈ ಬಾರಿ ಮೊದಲ ಬಾರಿ ಫೈನಲ್‌ಗೆ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದೇವೆ. ಈ ಹಾದಿ ಕಠಿಣವಾಗಿದ್ದರೂ, ಇದನ್ನು ನಾವು ಆನಂದಿಸುತ್ತೇವೆ. ಒಂದು ಪ್ರಶಸ್ತಿಗೆ ವಿಶ್ವದ ಅತ್ಯುತ್ತಮ ಆಟಗಾರರ ವಿರುದ್ಧ ಕಾದಾಟ ನಡೆಸುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ನಾವು ಸವಾಲನ್ನು ಸ್ವೀಕರಿಸುತ್ತೇವೆ,” ಎಂದು ಕಗಿಸೊ ರಬಾಡ ತಿಳಿಸಿದ್ದಾರೆ.

2019ರಲ್ಲಿ ವಿಫಲವಾಗಿದ್ದ ದಕ್ಷಿಣ ಆಫ್ರಿಕಾ ತಂಡ : ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ನಾಲ್ಕು ಬಾರಿ ಸೆಮಿಫೈನಲ್‌ ತಲುಪಿರುವ ದಕ್ಷಿಣ ಆಫ್ರಿಕಾ ತಂಡ 2019ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಲೀಗ್‌ ಹಂತಂದಿಂದಲೇ ಹೊರ ಬಿದ್ದಿತ್ತು. ಪ್ರಸ್ತುತ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ತಂಡದ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ 3-2 ಅಂತರದಲ್ಲಿ ಏಕದಿನ ಸರಣಿಯನ್ನು ಮುಡಿಗೇರಿಸಿಕೊಂಡಿತ್ತು.

ನಾಲ್ಕು ವರ್ಷಗಳ ಹಿಂದೆ ಕಗಿಸೊ ರಬಾಡ ಇಂಗ್ಲೆಂಡ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ತೆಂಬಾ ಬವೂಮ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ರಬಾಡ ಪ್ರತಿನಿಧಿಸಲಿದ್ದಾರೆ.
ಏಕದಿನ ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ: ತೆಂಬಾ ಬವೂಮ (ನಾಯಕ), ಗೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಝಾ ಹೆಂಡ್ರಿಕ್ಸ್, ಮಾರ್ಕೊ ಯೆನ್ಸನ್, ಹೆನ್ರಿಕ್ ಕ್ಲಾಸೆನ್, ಸಿಸಂಡ ಮಗಾಲಾ, ಕೇಶವ್ ಮಹಾರಾಜ್, ಏಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಎರ್ನಿಕ್‌ ನೊರ್ಕಿಯಾ, ಕಗಿಸೊ ರಬಾಡ, ತಬ್ರೈಜ್‌ ಶಾಮ್ಸಿ .
andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

2 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

3 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

3 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

3 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

3 hours ago