ಕ್ರೀಡೆ

ಗೆಲುವಿನೊಂದಿಗೆ ದಾಖಲೆ ಬರೆದ ಭಾರತ : ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

ಹೊಸದಿಲ್ಲಿ : 1973 ರಲ್ಲಿ ಮೊದಲ ಬಾರಿಗೆ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯ ನಡೆದಿತ್ತು. ದುರದೃಷ್ಟವಶಾತ್, ನ್ಯೂಜಿಲೆಂಡ್ ಮತ್ತು ಜಮೈಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಇತಿಹಾಸ.

ಎರಡನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಯಂಗ್ ಇಂಗ್ಲೆಂಡ್ ನಡುವಿನ ನಡೆದಾಗ, ಆಸ್ಟ್ರೇಲಿಯಾ ತಂಡವು 58 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಆಗ ಅದು ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸಿಂಗ್ ದಾಖಲೆಯಾಗಿತ್ತು. ಆದರೆ, ಈಗ ಆಟದ ಸ್ವರೂಪ ಬದಲಾಗಿದೆ. ಕ್ರೀಡೆ ಬಹಳ ದೂರ ಸಾಗಿದೆ. ಬೃಹತ್ ಗುರಿಗಳನ್ನು ಬೆನ್ನಟ್ಟುವ ಸಾಮರ್ಥ್ಯವು ಇದೀಗ ಹಲವು ತಂಡಗಳಲ್ಲಿ ಕಾಣಿಸುತ್ತಿದೆ.

ಆರು ಅತಿ ಹೆಚ್ಚು ಯಶಸ್ವಿ ಚೇಸಿಂಗ್‌ಗಳ ಪೈಕಿ ಈ ವರ್ಷವೇ ಎರಡು ದಾಖಲೆಯಾಗಿವೆ. ಮೊದಲ ಎರಡು ಸ್ಥಾನಗಳು ಈ ವರ್ಷ ಅಕ್ಟೋಬರ್‌ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಾಖಲಾಗಿವೆ. ಅತ್ಯಧಿಕ ಯಶಸ್ವಿ ಚೇಸಿಂಗ್ ದಾಖಲೆಯನ್ನು ಮೊದಲು ಆಸ್ಟ್ರೇಲಿಯಾ ಹೊಂದಿತ್ತು. ಇದೀಗ ಭಾರತ ಅತ್ಯಧಿಕ್ ಚೇಸ್ ಮಾಡಿದ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಇದನ್ನು ಓದಿ: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಘೋಷಣೆ

ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

* 2025ರಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 339 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 331 ರನ್ ಚೇಸ್ ಮಾಡಿ ಗೆದ್ದಿದೆ

* 2024ರಲ್ಲಿ ಶ್ರೀಲಂಕಾ ದಕ್ಷಿಣ ಆಫ್ರಿಕಾ ವಿರುದ್ಧ 302 ರನ್ ಚೇಸ್ ಮಾಡಿ ಗೆಲುವು ಸಾಧಿಸಿದೆ

* 2012ರಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧ 289 ರನ್ ಚೇಸ್ ಮಾಡಿ ಗೆದ್ದಿದೆ

* 2023ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 283 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 282 ರನ್ ಚೇಸ್ ಮಾಡಿ ಗೆದ್ದಿದೆಭಾರತ ಅತ್ಯಧಿಕ ಯಶಸ್ವಿ ಚೇಸ್

2025ರ ಅಕ್ಟೋಬರ್ 30 ರಂದು ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಮಹಿಳಾ ODI ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ 339 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಭಾರತದ ದಾಖಲೆ ಅಷ್ಟೇ ಅಲ್ಲ, ಮಹಿಳಾ ODI ಇತಿಹಾಸದಲ್ಲಿ ತಂಡವೊಂದರ ಅತ್ಯಧಿಕ ಯಶಸ್ವಿ ಚೇಸ್ ಆಗಿದೆ.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

42 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

48 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

57 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago