ಕ್ರೀಡೆ

ಗೆಲುವಿನೊಂದಿಗೆ ದಾಖಲೆ ಬರೆದ ಭಾರತ : ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

ಹೊಸದಿಲ್ಲಿ : 1973 ರಲ್ಲಿ ಮೊದಲ ಬಾರಿಗೆ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯ ನಡೆದಿತ್ತು. ದುರದೃಷ್ಟವಶಾತ್, ನ್ಯೂಜಿಲೆಂಡ್ ಮತ್ತು ಜಮೈಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಇತಿಹಾಸ.

ಎರಡನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಯಂಗ್ ಇಂಗ್ಲೆಂಡ್ ನಡುವಿನ ನಡೆದಾಗ, ಆಸ್ಟ್ರೇಲಿಯಾ ತಂಡವು 58 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಆಗ ಅದು ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸಿಂಗ್ ದಾಖಲೆಯಾಗಿತ್ತು. ಆದರೆ, ಈಗ ಆಟದ ಸ್ವರೂಪ ಬದಲಾಗಿದೆ. ಕ್ರೀಡೆ ಬಹಳ ದೂರ ಸಾಗಿದೆ. ಬೃಹತ್ ಗುರಿಗಳನ್ನು ಬೆನ್ನಟ್ಟುವ ಸಾಮರ್ಥ್ಯವು ಇದೀಗ ಹಲವು ತಂಡಗಳಲ್ಲಿ ಕಾಣಿಸುತ್ತಿದೆ.

ಆರು ಅತಿ ಹೆಚ್ಚು ಯಶಸ್ವಿ ಚೇಸಿಂಗ್‌ಗಳ ಪೈಕಿ ಈ ವರ್ಷವೇ ಎರಡು ದಾಖಲೆಯಾಗಿವೆ. ಮೊದಲ ಎರಡು ಸ್ಥಾನಗಳು ಈ ವರ್ಷ ಅಕ್ಟೋಬರ್‌ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಾಖಲಾಗಿವೆ. ಅತ್ಯಧಿಕ ಯಶಸ್ವಿ ಚೇಸಿಂಗ್ ದಾಖಲೆಯನ್ನು ಮೊದಲು ಆಸ್ಟ್ರೇಲಿಯಾ ಹೊಂದಿತ್ತು. ಇದೀಗ ಭಾರತ ಅತ್ಯಧಿಕ್ ಚೇಸ್ ಮಾಡಿದ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಇದನ್ನು ಓದಿ: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಘೋಷಣೆ

ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

* 2025ರಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 339 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 331 ರನ್ ಚೇಸ್ ಮಾಡಿ ಗೆದ್ದಿದೆ

* 2024ರಲ್ಲಿ ಶ್ರೀಲಂಕಾ ದಕ್ಷಿಣ ಆಫ್ರಿಕಾ ವಿರುದ್ಧ 302 ರನ್ ಚೇಸ್ ಮಾಡಿ ಗೆಲುವು ಸಾಧಿಸಿದೆ

* 2012ರಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧ 289 ರನ್ ಚೇಸ್ ಮಾಡಿ ಗೆದ್ದಿದೆ

* 2023ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 283 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 282 ರನ್ ಚೇಸ್ ಮಾಡಿ ಗೆದ್ದಿದೆಭಾರತ ಅತ್ಯಧಿಕ ಯಶಸ್ವಿ ಚೇಸ್

2025ರ ಅಕ್ಟೋಬರ್ 30 ರಂದು ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಮಹಿಳಾ ODI ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ 339 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಭಾರತದ ದಾಖಲೆ ಅಷ್ಟೇ ಅಲ್ಲ, ಮಹಿಳಾ ODI ಇತಿಹಾಸದಲ್ಲಿ ತಂಡವೊಂದರ ಅತ್ಯಧಿಕ ಯಶಸ್ವಿ ಚೇಸ್ ಆಗಿದೆ.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

11 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

11 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

11 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

11 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

11 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

11 hours ago