ಕ್ರೀಡೆ

ಗೆಲುವಿನೊಂದಿಗೆ ದಾಖಲೆ ಬರೆದ ಭಾರತ : ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

ಹೊಸದಿಲ್ಲಿ : 1973 ರಲ್ಲಿ ಮೊದಲ ಬಾರಿಗೆ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯ ನಡೆದಿತ್ತು. ದುರದೃಷ್ಟವಶಾತ್, ನ್ಯೂಜಿಲೆಂಡ್ ಮತ್ತು ಜಮೈಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಇತಿಹಾಸ.

ಎರಡನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಯಂಗ್ ಇಂಗ್ಲೆಂಡ್ ನಡುವಿನ ನಡೆದಾಗ, ಆಸ್ಟ್ರೇಲಿಯಾ ತಂಡವು 58 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಆಗ ಅದು ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸಿಂಗ್ ದಾಖಲೆಯಾಗಿತ್ತು. ಆದರೆ, ಈಗ ಆಟದ ಸ್ವರೂಪ ಬದಲಾಗಿದೆ. ಕ್ರೀಡೆ ಬಹಳ ದೂರ ಸಾಗಿದೆ. ಬೃಹತ್ ಗುರಿಗಳನ್ನು ಬೆನ್ನಟ್ಟುವ ಸಾಮರ್ಥ್ಯವು ಇದೀಗ ಹಲವು ತಂಡಗಳಲ್ಲಿ ಕಾಣಿಸುತ್ತಿದೆ.

ಆರು ಅತಿ ಹೆಚ್ಚು ಯಶಸ್ವಿ ಚೇಸಿಂಗ್‌ಗಳ ಪೈಕಿ ಈ ವರ್ಷವೇ ಎರಡು ದಾಖಲೆಯಾಗಿವೆ. ಮೊದಲ ಎರಡು ಸ್ಥಾನಗಳು ಈ ವರ್ಷ ಅಕ್ಟೋಬರ್‌ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಾಖಲಾಗಿವೆ. ಅತ್ಯಧಿಕ ಯಶಸ್ವಿ ಚೇಸಿಂಗ್ ದಾಖಲೆಯನ್ನು ಮೊದಲು ಆಸ್ಟ್ರೇಲಿಯಾ ಹೊಂದಿತ್ತು. ಇದೀಗ ಭಾರತ ಅತ್ಯಧಿಕ್ ಚೇಸ್ ಮಾಡಿದ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಇದನ್ನು ಓದಿ: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ : ಸಿಎಂ ಘೋಷಣೆ

ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ಚೇಸ್

* 2025ರಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 339 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 331 ರನ್ ಚೇಸ್ ಮಾಡಿ ಗೆದ್ದಿದೆ

* 2024ರಲ್ಲಿ ಶ್ರೀಲಂಕಾ ದಕ್ಷಿಣ ಆಫ್ರಿಕಾ ವಿರುದ್ಧ 302 ರನ್ ಚೇಸ್ ಮಾಡಿ ಗೆಲುವು ಸಾಧಿಸಿದೆ

* 2012ರಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧ 289 ರನ್ ಚೇಸ್ ಮಾಡಿ ಗೆದ್ದಿದೆ

* 2023ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 283 ರನ್ ಚೇಸ್ ಮಾಡಿ ಗೆದ್ದಿದೆ

* 2025ರಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ 282 ರನ್ ಚೇಸ್ ಮಾಡಿ ಗೆದ್ದಿದೆಭಾರತ ಅತ್ಯಧಿಕ ಯಶಸ್ವಿ ಚೇಸ್

2025ರ ಅಕ್ಟೋಬರ್ 30 ರಂದು ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಮಹಿಳಾ ODI ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ 339 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಭಾರತದ ದಾಖಲೆ ಅಷ್ಟೇ ಅಲ್ಲ, ಮಹಿಳಾ ODI ಇತಿಹಾಸದಲ್ಲಿ ತಂಡವೊಂದರ ಅತ್ಯಧಿಕ ಯಶಸ್ವಿ ಚೇಸ್ ಆಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

11 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

11 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

14 hours ago