ದುಬೈ: ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದ್ದು, ಆ ಪಿಚ್ನಲ್ಲಿ ಹೇಗೆ ಆಡಬೇಕೆಂದು ತಂಡಕ್ಕೆ ಸ್ಪಷ್ಟತೆ ಇದೆ ಎಂದು ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಹೇಳಿದ್ದಾರೆ.
ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಢ್ ತಂಡಗಳು ಸೆಣಸಲಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇನ್, ಭಾರತಕ್ಕೆ ಒಂದೇ ಕ್ರೀಡಾಂಗಣದಲ್ಲಿಆಡುವ ಅನುಕೂಲತೆ ಇದ್ದು, ಇದರಿಂದ ಪಂದ್ಯದ ನಂತರ ಸಾಕಷ್ಟು ವಿಶ್ರಾಂತಿ ಮತ್ತು ಅದೇ ಮೈದಾನದಲ್ಲಿ ಪೂರ್ವ ಸಿದ್ದತೆಗೆ ಅವಕಾಶ ಇರುತ್ತದೆ.
ನಾವು ಈ ಕುರಿತು ಹೆಚ್ಚು ಚಿಂತಿತರಾಗಿಲ್ಲ. ದುಬೈ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚು ನೆರವು ನೀಡಲಿದೆ. ಅದನ್ನು ಪರಿಗಣಿಸಿ ಧನಾತ್ಮಕ ಅಂಶಗಳೊಂದಿಗೆ ಫೈನಲ್ಗಾಗಿ ಸಿದ್ದತೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ದುಬೈ ಪಿಚ್ನಲ್ಲಿ ಒಂದು ಪಂದ್ಯ ಆಡಿರುವುದರಿಂದ ಪಿಚ್ಗೆ ಹೊಂದಿಕೊಳ್ಳಲು ನೆರವಾಗಲಿದೆ ಎಂದು ಹೇಳಿದ್ದಾರೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…