ಕ್ರೀಡೆ

93 ವರ್ಷಗಳ ಇತಿಹಾಸದಲ್ಲೇ ಹೀನಾಯ ದಾಖಲೆ ಬರೆದ ಭಾರತ!

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಇದನ್ನು ಓದಿ: ಓದುಗರ ಪತ್ರ: ಭಾರತ ಕ್ರಿಕೆಟ್‌ಗೆ ಡಬಲ್ ಧಮಾಕಾ

ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ.

93 ರ್ಷಗಳ ಹೀನಾಯ ದಾಖಲೆ
ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿದ್ದು, ಭಾರತ ತಂಡವು ಈ ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ. ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಹೀನಾಯ ಸೋಲು ಕೂಡ ಇತಿಹಾಸ ಪುಟ ಸೇರಿದೆ.

ಆಂದೋಲನ ಡೆಸ್ಕ್

Recent Posts

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

4 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

13 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

1 hour ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

1 hour ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

2 hours ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

2 hours ago