ಕ್ರೀಡೆ

93 ವರ್ಷಗಳ ಇತಿಹಾಸದಲ್ಲೇ ಹೀನಾಯ ದಾಖಲೆ ಬರೆದ ಭಾರತ!

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಇದನ್ನು ಓದಿ: ಓದುಗರ ಪತ್ರ: ಭಾರತ ಕ್ರಿಕೆಟ್‌ಗೆ ಡಬಲ್ ಧಮಾಕಾ

ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ.

93 ರ್ಷಗಳ ಹೀನಾಯ ದಾಖಲೆ
ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿದ್ದು, ಭಾರತ ತಂಡವು ಈ ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ. ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಹೀನಾಯ ಸೋಲು ಕೂಡ ಇತಿಹಾಸ ಪುಟ ಸೇರಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

23 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

27 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

40 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

46 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

4 hours ago