ಕ್ರೀಡೆ

93 ವರ್ಷಗಳ ಇತಿಹಾಸದಲ್ಲೇ ಹೀನಾಯ ದಾಖಲೆ ಬರೆದ ಭಾರತ!

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಇದನ್ನು ಓದಿ: ಓದುಗರ ಪತ್ರ: ಭಾರತ ಕ್ರಿಕೆಟ್‌ಗೆ ಡಬಲ್ ಧಮಾಕಾ

ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ.

93 ರ್ಷಗಳ ಹೀನಾಯ ದಾಖಲೆ
ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿದ್ದು, ಭಾರತ ತಂಡವು ಈ ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ. ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಹೀನಾಯ ಸೋಲು ಕೂಡ ಇತಿಹಾಸ ಪುಟ ಸೇರಿದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

20 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

20 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

20 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

20 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

21 hours ago