ಕ್ರೀಡೆ

93 ವರ್ಷಗಳ ಇತಿಹಾಸದಲ್ಲೇ ಹೀನಾಯ ದಾಖಲೆ ಬರೆದ ಭಾರತ!

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಇದನ್ನು ಓದಿ: ಓದುಗರ ಪತ್ರ: ಭಾರತ ಕ್ರಿಕೆಟ್‌ಗೆ ಡಬಲ್ ಧಮಾಕಾ

ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ.

93 ರ್ಷಗಳ ಹೀನಾಯ ದಾಖಲೆ
ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿದ್ದು, ಭಾರತ ತಂಡವು ಈ ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ. ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಹೀನಾಯ ಸೋಲು ಕೂಡ ಇತಿಹಾಸ ಪುಟ ಸೇರಿದೆ.

ಆಂದೋಲನ ಡೆಸ್ಕ್

Recent Posts

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

22 mins ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

1 hour ago

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

4 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

4 hours ago