ಕ್ರೀಡೆ

Paris Olympics 2024: ಹಾಕಿಯಲ್ಲಿ ಕಂಚು ಗೆದ್ದ ಭಾರತ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್‌ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್‌ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ ಗೆಲ್ಲುಚ ನೆಚ್ಚಿನ ತಂಡ ಎಂಬ ನರೀಕ್ಷೆ ಹುಟ್ಟುಹಾಕಿದ್ದರು.

ಆದರೆ ಜರ್ಮನ್‌ ವಿರುದ್ಧ ಸೋತು ಕಂಚಿನ ಪದಕಕ್ಕಾಗಿ ಸ್ಪೇನ್‌ ವಿರುದ್ಧ ಕಣಕ್ಕಿಳಿಯಬೇಕಾಯಿತು. ಇನ್ನು ಇಂದು (ಗುರುವಾರ, ಆ.8)ನಡೆದ ಭಾರತ ಹಾಗೂ ಸ್ಪೇನ್‌ ನಡುವಿನ ಕಂಚಿನ ಪದಕ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಗೆಲುವು ದಾಖಲಿಸುವ ಮೂಲಕ ಮತ್ತೊಮ್ಮೆ ಕಂಚಿಗೆ ಕೊರಳೊಡ್ಡಿದೆ.

ಪಂದ್ಯದ ಆರಂಭದಿಂದಲೂ ತಮ್ಮ ಹಿಡಿತದಲ್ಲಿಯೇ ಮುನ್ನಡೆ ಸಾಧಿಸುತ್ತಿದ್ದ ಭಾರತ ತಂಡ ಸ್ಪೇನ್‌ ಕಟ್ಟಿಹಾಕುವಲ್ಲಿ ಸಫಲವಾಯಿತು. ಭಾರತ ತಂಡದ ಪರವಾಗಿ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಅವರು ಎರಡು ಗೋಲು ಗಳಿಸಿದರು. ಇನ್ನು ಸ್ಪೇನ್‌ ಒಡ್ಡಿದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡದ ಗೋಲ್‌ ಕೀಪರ್‌ ಶ್ರೀಜೇಶ್‌ ಅವರು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

8 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

23 mins ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

34 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

52 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

1 hour ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago