ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ ಗೆಲ್ಲುಚ ನೆಚ್ಚಿನ ತಂಡ ಎಂಬ ನರೀಕ್ಷೆ ಹುಟ್ಟುಹಾಕಿದ್ದರು.
ಆದರೆ ಜರ್ಮನ್ ವಿರುದ್ಧ ಸೋತು ಕಂಚಿನ ಪದಕಕ್ಕಾಗಿ ಸ್ಪೇನ್ ವಿರುದ್ಧ ಕಣಕ್ಕಿಳಿಯಬೇಕಾಯಿತು. ಇನ್ನು ಇಂದು (ಗುರುವಾರ, ಆ.8)ನಡೆದ ಭಾರತ ಹಾಗೂ ಸ್ಪೇನ್ ನಡುವಿನ ಕಂಚಿನ ಪದಕ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಗೆಲುವು ದಾಖಲಿಸುವ ಮೂಲಕ ಮತ್ತೊಮ್ಮೆ ಕಂಚಿಗೆ ಕೊರಳೊಡ್ಡಿದೆ.
ಪಂದ್ಯದ ಆರಂಭದಿಂದಲೂ ತಮ್ಮ ಹಿಡಿತದಲ್ಲಿಯೇ ಮುನ್ನಡೆ ಸಾಧಿಸುತ್ತಿದ್ದ ಭಾರತ ತಂಡ ಸ್ಪೇನ್ ಕಟ್ಟಿಹಾಕುವಲ್ಲಿ ಸಫಲವಾಯಿತು. ಭಾರತ ತಂಡದ ಪರವಾಗಿ ನಾಯಕ ಹರ್ಮನ್ಪ್ರೀತ್ ಸಿಂಗ್ ಅವರು ಎರಡು ಗೋಲು ಗಳಿಸಿದರು. ಇನ್ನು ಸ್ಪೇನ್ ಒಡ್ಡಿದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡದ ಗೋಲ್ ಕೀಪರ್ ಶ್ರೀಜೇಶ್ ಅವರು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…