ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ ಗೆಲ್ಲುಚ ನೆಚ್ಚಿನ ತಂಡ ಎಂಬ ನರೀಕ್ಷೆ ಹುಟ್ಟುಹಾಕಿದ್ದರು.
ಆದರೆ ಜರ್ಮನ್ ವಿರುದ್ಧ ಸೋತು ಕಂಚಿನ ಪದಕಕ್ಕಾಗಿ ಸ್ಪೇನ್ ವಿರುದ್ಧ ಕಣಕ್ಕಿಳಿಯಬೇಕಾಯಿತು. ಇನ್ನು ಇಂದು (ಗುರುವಾರ, ಆ.8)ನಡೆದ ಭಾರತ ಹಾಗೂ ಸ್ಪೇನ್ ನಡುವಿನ ಕಂಚಿನ ಪದಕ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಗೆಲುವು ದಾಖಲಿಸುವ ಮೂಲಕ ಮತ್ತೊಮ್ಮೆ ಕಂಚಿಗೆ ಕೊರಳೊಡ್ಡಿದೆ.
ಪಂದ್ಯದ ಆರಂಭದಿಂದಲೂ ತಮ್ಮ ಹಿಡಿತದಲ್ಲಿಯೇ ಮುನ್ನಡೆ ಸಾಧಿಸುತ್ತಿದ್ದ ಭಾರತ ತಂಡ ಸ್ಪೇನ್ ಕಟ್ಟಿಹಾಕುವಲ್ಲಿ ಸಫಲವಾಯಿತು. ಭಾರತ ತಂಡದ ಪರವಾಗಿ ನಾಯಕ ಹರ್ಮನ್ಪ್ರೀತ್ ಸಿಂಗ್ ಅವರು ಎರಡು ಗೋಲು ಗಳಿಸಿದರು. ಇನ್ನು ಸ್ಪೇನ್ ಒಡ್ಡಿದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡದ ಗೋಲ್ ಕೀಪರ್ ಶ್ರೀಜೇಶ್ ಅವರು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…