ಕ್ರೀಡೆ

ICC TEST RANKING ಪಟ್ಟಿಯ ಮೂರು ಮಾದರಿಯಲ್ಲೂ ಭಾರತ ನಂ 1 ಸ್ಥಾನ

ದುಬೈ: ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಟೀಂ ಇಂಡಿಯಾ ಟೆಸ್ಟ್​, ಏಕದಿನ ಮತ್ತು ಟಿ-20 ಸೇರಿ ಮೂರು ಮಾದರಿಯಲ್ಲೂ ನಂಬರ್​ ಒನ್​ ಪಟ್ಟಕ್ಕೇರಿತ್ತು. ಟಿ-20ರಲ್ಲಿ 267 ಅಂಕ, ಏಕದಿನದಲ್ಲಿ 114 ಅಂಕ ಮತ್ತು ಟೆಸ್ಟ್​ ಕ್ರಿಕೆಟ್​ನಲ್ಲಿ 115 ಅಂಕಗಳೊಂದಿಗೆ ಭಾರತ ಅಗ್ರಸ್ಥಾನದಲ್ಲಿತ್ತು. ಆದ್ರೆ 126 ಅಂಕಗಳನ್ನು ಪಡೆದಿದ್ದ ಆಸ್ಟ್ರೇಲಿಯಾ ತಂಡ ಮಾತ್ರ ಎರಡನೇ ಸ್ಥಾನದಲ್ಲಿತ್ತು.ಮೊದಲ ಟೆಸ್ಟ್‌ನಲ್ಲಿ ಸೋತಿದ್ದ ಆಸೀಸ್ 15 ಅಂಕ ಕಳೆದುಕೊಂಡು ಐಸಿಸಿ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 2:30ಕ್ಕೆ ಎರಡನೇ ರ್ಯಾಂಕ್‌ಗೆ ಕುಸಿದಿತ್ತು. ಆದರೆ ಮತ್ತೆ ತಪ್ಪಿನ ಅರಿವಾಗಿ ಸಂಜೆ 7 ಗಂಟೆಗೆ ಐಸಿಸಿ ಇದನ್ನು ಸರಿಪಡಿಸಿಕೊಂಡಿದೆ. ಇದರಿಂದಾಗಿ ಮೊದಲೆರಡು ಸ್ಥಾನಗಳಲ್ಲಿ ಆಸೀಸ್ ಹಾಗೂ ಭಾರತ ಮುಂದುವರಿದಿದೆ.


ಏಕದಿನ ಹಾಗೂ ಟಿ20ಯಲ್ಲಿ ಟೀಂ ಇಂಡಿಯಾ ನಂಬರ್ ಒನ್ ಆಗಿರುವುದು ಈಗಾಗಲೇ ತಿಳಿದೇ ಇದೆ. ರೋಹಿತ್ ಸೇನೆ ಎರಡನೇ ಟೆಸ್ಟ್‌ನಲ್ಲಿ ಗೆದ್ದರೆ ಟೆಸ್ಟ್‌ನಲ್ಲೂ ಅಗ್ರಸ್ಥಾನ ಭದ್ರಪಡಿಸಿಕೊಳ್ಳಲಿದೆ. ಮತ್ತೊಂದೆಡೆ, ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಸ್ಪಿನ್ನರ್ ಅಶ್ವಿನ್ ಎರಡನೇ ರ‍್ಯಾಂಕಿಂಗ್‌ ಪಡೆದಿದ್ದಾರೆ. ಮೊಣಕಾಲು ಶಸ್ತ್ರಚಿಕಿತ್ಸೆಯಿಂದ ಬಲಿಷ್ಠ ಪುನರಾಗಮನ ಮಾಡಿಕೊಂಡಿರುವ ಜಡೇಜಾ ಬೌಲರ್​ಗಳ ರ‍್ಯಾಂಕಿಂಗ್​ನಲ್ಲಿ 16ನೇ ಸ್ಥಾನಕ್ಕೆ ತಲುಪಿದ್ದಾರೆ. ಆಸೀಸ್ ನಾಯಕ ಕಮ್ಮಿನ್ಸ್ ಅಗ್ರಸ್ಥಾನದಲ್ಲಿದ್ದಾರೆ.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

10 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago