ಕ್ರೀಡೆ

‘2023ರ ಏಕದಿನ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡ ಭಾರತ’: ಮುತ್ತಯ್ಯ ಮರಳಿಧರನ್!

ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್‌ ಮುತ್ತಯ್ಯ ಮುರಳಿಧರನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿದೆ.

2011ರಲ್ಲಿ ಶ್ರೀಲಂಕಾ, ಬಾಂಗ್ಲಾದೇಶದ ಜೊತೆ ಭಾರತ ತಂಡ ಏಕದಿನ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿತ್ತು. ಈ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮುತ್ತಯ್ಯ ಮುರಳಿಧರನ್‌ ಕೂಡ ಆಡಿದ್ದರು. ಅತ್ಯುತ್ತಮ ಪ್ರದರ್ಶನ ತೋರಿದ್ದ ಟೀಮ್‌ ಇಂಡಿಯಾ ಫೈನಲ್‌ ಗೆದ್ದು ಎರಡನೇ ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

ಇತ್ತೀಚೆಗೆ ಸ್ಟಾರ್‌ ಸ್ಪೋರ್ಟ್ಸ್‌ ಜತೆ ಮಾತನಾಡಿದ್ದ ಮುತ್ತಯ್ಯ ಮುರಳಿಧರನ್‌, “2023ರ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ vs ಇಂಗ್ಲೆಂಡ್‌ ತಂಡಗಳನ್ನು ನೋಡಲು ಎದುರು ನೋಡುತ್ತಿದ್ದೇನೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ನೆಚ್ಚಿನ ತಂಡವಾಗಿದೆ. ಏಕೆಂದರೆ ತವರಿನಲ್ಲಿ ಹೇಗೆ ಗೆಲ್ಲಬೇಕೆಂದು ಭಾರತ ತಂಡಕ್ಕೆ ಚೆನ್ನಾಗಿ ಗೊತ್ತಿದೆ. ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟರೆ ಪಂದ್ಯ ತುಂಬಾ ಆಸಕ್ತಿಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.

ಏಷ್ಯಾ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಲಿವೆ: ಸೆಹ್ವಾಗ್‌ ಭಾರತದ ಕಂಡೀಷನ್ಸ್‌ ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಏಷ್ಯಾ ತಂಡಗಳಿಗೆ ನೆರವಾಗಲಿದೆ. ಏಕೆಂದರೆ ಇಲ್ಲಿ ಸ್ಪಿನ್‌ ಸ್ನೇಹಿ ವಿಕೆಟ್‌ ಇರುವ ಕಾರಣ ಅತ್ಯುತ್ತಮ ಸ್ಪಿನ್ನರ್‌ಗಳನ್ನು ಹೊಂದಿರುವ ತಂಡಗಳು ಮೇಲುಗೈ ಸಾಧಿಸಲಿವೆ. ಈ ನಿಟ್ಟಿನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮೇಲುಗೈ ಸಾಧಿಸಬಹುದು. ಆದರೆ, ಅಫಘಾನಿಸ್ತಾನ ತಂಡದಲ್ಲಿ ಉತ್ತಮ ಸ್ಪಿನ್ನರ್‌ಗಳಿದ್ದರೂ ಬ್ಯಾಟಿಂಗ್ ಸಮಸ್ಯೆಯಿಂದ ಆಫ್ಘನ್ ಮುನ್ನಡೆ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಉಪ ಖಂಡಗಳ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಬಹುದು. ಭಾರತ ಹಾಗೂ ಶ್ರೀಲಂಕಾ ತಂಡಗಳಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. ಅಫಘಾನಿಸ್ತಾನ ತಂಡದಲ್ಲಿ ಬ್ಯಾಟಿಂಗ್‌ ಲೈನ್‌ ಅಪ್‌ ಇಲ್ಲವೇ ಇಲ್ಲ, ಆದರೆ ಈ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. 2011ರಲ್ಲಿ ಎರಡು ಉತ್ತಮ ತಂಡಗಳು ಫೈನಲ್‌ ತಲುಪಿದ್ದವು ಹಾಗೂ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ತಂಡ ಗೆಲುವು ಸಾಧಿಸಿತ್ತು,” ಎಂದು ಇದೇ ವೇಳೆ ಉಪಸ್ಥಿತರಿದ್ದ ವೀರೇಂದ್ರ ಸೆಹ್ವಾಗ್‌ ತಿಳಿಸಿದ್ದಾರೆ.

ಭಾರತ ತಂಡಕ್ಕೆ ಆಸ್ಟ್ರೇಲಿಯಾ ಮೊದಲ ಎದುರಾಳಿ : 2023ರ ಏಕದಿನ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಜೂನ್‌ 27 ರಂದು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತಂಡ ಅಕ್ಟೋಬರ್‌ 8 ರಂದು ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲನೇ ಪಂದ್ಯದಲ್ಲಿ ಸೆಣಸಲಿದೆ. ನಂತರ ಅಕ್ಟೋಬರ್‌ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಟ ನಡೆಸಲಿದೆ.

andolanait

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

9 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

9 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

12 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

12 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

12 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

13 hours ago