ಕ್ರೀಡೆ

‘2023ರ ಏಕದಿನ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡ ಭಾರತ’: ಮುತ್ತಯ್ಯ ಮರಳಿಧರನ್!

ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್‌ ಮುತ್ತಯ್ಯ ಮುರಳಿಧರನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿದೆ.

2011ರಲ್ಲಿ ಶ್ರೀಲಂಕಾ, ಬಾಂಗ್ಲಾದೇಶದ ಜೊತೆ ಭಾರತ ತಂಡ ಏಕದಿನ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿತ್ತು. ಈ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮುತ್ತಯ್ಯ ಮುರಳಿಧರನ್‌ ಕೂಡ ಆಡಿದ್ದರು. ಅತ್ಯುತ್ತಮ ಪ್ರದರ್ಶನ ತೋರಿದ್ದ ಟೀಮ್‌ ಇಂಡಿಯಾ ಫೈನಲ್‌ ಗೆದ್ದು ಎರಡನೇ ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

ಇತ್ತೀಚೆಗೆ ಸ್ಟಾರ್‌ ಸ್ಪೋರ್ಟ್ಸ್‌ ಜತೆ ಮಾತನಾಡಿದ್ದ ಮುತ್ತಯ್ಯ ಮುರಳಿಧರನ್‌, “2023ರ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ vs ಇಂಗ್ಲೆಂಡ್‌ ತಂಡಗಳನ್ನು ನೋಡಲು ಎದುರು ನೋಡುತ್ತಿದ್ದೇನೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ನೆಚ್ಚಿನ ತಂಡವಾಗಿದೆ. ಏಕೆಂದರೆ ತವರಿನಲ್ಲಿ ಹೇಗೆ ಗೆಲ್ಲಬೇಕೆಂದು ಭಾರತ ತಂಡಕ್ಕೆ ಚೆನ್ನಾಗಿ ಗೊತ್ತಿದೆ. ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟರೆ ಪಂದ್ಯ ತುಂಬಾ ಆಸಕ್ತಿಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.

ಏಷ್ಯಾ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಲಿವೆ: ಸೆಹ್ವಾಗ್‌ ಭಾರತದ ಕಂಡೀಷನ್ಸ್‌ ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಏಷ್ಯಾ ತಂಡಗಳಿಗೆ ನೆರವಾಗಲಿದೆ. ಏಕೆಂದರೆ ಇಲ್ಲಿ ಸ್ಪಿನ್‌ ಸ್ನೇಹಿ ವಿಕೆಟ್‌ ಇರುವ ಕಾರಣ ಅತ್ಯುತ್ತಮ ಸ್ಪಿನ್ನರ್‌ಗಳನ್ನು ಹೊಂದಿರುವ ತಂಡಗಳು ಮೇಲುಗೈ ಸಾಧಿಸಲಿವೆ. ಈ ನಿಟ್ಟಿನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮೇಲುಗೈ ಸಾಧಿಸಬಹುದು. ಆದರೆ, ಅಫಘಾನಿಸ್ತಾನ ತಂಡದಲ್ಲಿ ಉತ್ತಮ ಸ್ಪಿನ್ನರ್‌ಗಳಿದ್ದರೂ ಬ್ಯಾಟಿಂಗ್ ಸಮಸ್ಯೆಯಿಂದ ಆಫ್ಘನ್ ಮುನ್ನಡೆ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಉಪ ಖಂಡಗಳ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಬಹುದು. ಭಾರತ ಹಾಗೂ ಶ್ರೀಲಂಕಾ ತಂಡಗಳಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. ಅಫಘಾನಿಸ್ತಾನ ತಂಡದಲ್ಲಿ ಬ್ಯಾಟಿಂಗ್‌ ಲೈನ್‌ ಅಪ್‌ ಇಲ್ಲವೇ ಇಲ್ಲ, ಆದರೆ ಈ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. 2011ರಲ್ಲಿ ಎರಡು ಉತ್ತಮ ತಂಡಗಳು ಫೈನಲ್‌ ತಲುಪಿದ್ದವು ಹಾಗೂ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ತಂಡ ಗೆಲುವು ಸಾಧಿಸಿತ್ತು,” ಎಂದು ಇದೇ ವೇಳೆ ಉಪಸ್ಥಿತರಿದ್ದ ವೀರೇಂದ್ರ ಸೆಹ್ವಾಗ್‌ ತಿಳಿಸಿದ್ದಾರೆ.

ಭಾರತ ತಂಡಕ್ಕೆ ಆಸ್ಟ್ರೇಲಿಯಾ ಮೊದಲ ಎದುರಾಳಿ : 2023ರ ಏಕದಿನ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಜೂನ್‌ 27 ರಂದು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತಂಡ ಅಕ್ಟೋಬರ್‌ 8 ರಂದು ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲನೇ ಪಂದ್ಯದಲ್ಲಿ ಸೆಣಸಲಿದೆ. ನಂತರ ಅಕ್ಟೋಬರ್‌ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಟ ನಡೆಸಲಿದೆ.

andolanait

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

18 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago