ಕ್ರೀಡೆ

‘2023ರ ಏಕದಿನ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡ ಭಾರತ’: ಮುತ್ತಯ್ಯ ಮರಳಿಧರನ್!

ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್‌ ಮುತ್ತಯ್ಯ ಮುರಳಿಧರನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿದೆ.

2011ರಲ್ಲಿ ಶ್ರೀಲಂಕಾ, ಬಾಂಗ್ಲಾದೇಶದ ಜೊತೆ ಭಾರತ ತಂಡ ಏಕದಿನ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿತ್ತು. ಈ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮುತ್ತಯ್ಯ ಮುರಳಿಧರನ್‌ ಕೂಡ ಆಡಿದ್ದರು. ಅತ್ಯುತ್ತಮ ಪ್ರದರ್ಶನ ತೋರಿದ್ದ ಟೀಮ್‌ ಇಂಡಿಯಾ ಫೈನಲ್‌ ಗೆದ್ದು ಎರಡನೇ ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

ಇತ್ತೀಚೆಗೆ ಸ್ಟಾರ್‌ ಸ್ಪೋರ್ಟ್ಸ್‌ ಜತೆ ಮಾತನಾಡಿದ್ದ ಮುತ್ತಯ್ಯ ಮುರಳಿಧರನ್‌, “2023ರ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ vs ಇಂಗ್ಲೆಂಡ್‌ ತಂಡಗಳನ್ನು ನೋಡಲು ಎದುರು ನೋಡುತ್ತಿದ್ದೇನೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ನೆಚ್ಚಿನ ತಂಡವಾಗಿದೆ. ಏಕೆಂದರೆ ತವರಿನಲ್ಲಿ ಹೇಗೆ ಗೆಲ್ಲಬೇಕೆಂದು ಭಾರತ ತಂಡಕ್ಕೆ ಚೆನ್ನಾಗಿ ಗೊತ್ತಿದೆ. ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟರೆ ಪಂದ್ಯ ತುಂಬಾ ಆಸಕ್ತಿಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.

ಏಷ್ಯಾ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಲಿವೆ: ಸೆಹ್ವಾಗ್‌ ಭಾರತದ ಕಂಡೀಷನ್ಸ್‌ ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಏಷ್ಯಾ ತಂಡಗಳಿಗೆ ನೆರವಾಗಲಿದೆ. ಏಕೆಂದರೆ ಇಲ್ಲಿ ಸ್ಪಿನ್‌ ಸ್ನೇಹಿ ವಿಕೆಟ್‌ ಇರುವ ಕಾರಣ ಅತ್ಯುತ್ತಮ ಸ್ಪಿನ್ನರ್‌ಗಳನ್ನು ಹೊಂದಿರುವ ತಂಡಗಳು ಮೇಲುಗೈ ಸಾಧಿಸಲಿವೆ. ಈ ನಿಟ್ಟಿನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮೇಲುಗೈ ಸಾಧಿಸಬಹುದು. ಆದರೆ, ಅಫಘಾನಿಸ್ತಾನ ತಂಡದಲ್ಲಿ ಉತ್ತಮ ಸ್ಪಿನ್ನರ್‌ಗಳಿದ್ದರೂ ಬ್ಯಾಟಿಂಗ್ ಸಮಸ್ಯೆಯಿಂದ ಆಫ್ಘನ್ ಮುನ್ನಡೆ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಉಪ ಖಂಡಗಳ ತಂಡಗಳಿಗೆ ಭಾರತದ ಪಿಚ್‌ಗಳು ನೆರವಾಗಬಹುದು. ಭಾರತ ಹಾಗೂ ಶ್ರೀಲಂಕಾ ತಂಡಗಳಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. ಅಫಘಾನಿಸ್ತಾನ ತಂಡದಲ್ಲಿ ಬ್ಯಾಟಿಂಗ್‌ ಲೈನ್‌ ಅಪ್‌ ಇಲ್ಲವೇ ಇಲ್ಲ, ಆದರೆ ಈ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್‌ಗಳಿದ್ದಾರೆ. 2011ರಲ್ಲಿ ಎರಡು ಉತ್ತಮ ತಂಡಗಳು ಫೈನಲ್‌ ತಲುಪಿದ್ದವು ಹಾಗೂ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ತಂಡ ಗೆಲುವು ಸಾಧಿಸಿತ್ತು,” ಎಂದು ಇದೇ ವೇಳೆ ಉಪಸ್ಥಿತರಿದ್ದ ವೀರೇಂದ್ರ ಸೆಹ್ವಾಗ್‌ ತಿಳಿಸಿದ್ದಾರೆ.

ಭಾರತ ತಂಡಕ್ಕೆ ಆಸ್ಟ್ರೇಲಿಯಾ ಮೊದಲ ಎದುರಾಳಿ : 2023ರ ಏಕದಿನ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಜೂನ್‌ 27 ರಂದು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತಂಡ ಅಕ್ಟೋಬರ್‌ 8 ರಂದು ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲನೇ ಪಂದ್ಯದಲ್ಲಿ ಸೆಣಸಲಿದೆ. ನಂತರ ಅಕ್ಟೋಬರ್‌ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಟ ನಡೆಸಲಿದೆ.

andolanait

Recent Posts

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ…

2 mins ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

23 mins ago

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

59 mins ago

ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ…

2 hours ago

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

6 hours ago