ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲುವ ಮೂಲಕ 10 ವರ್ಷದ ಬಳಿಕ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ.
BGT ಟ್ರೋಫಿಯ 5ನೇ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ಭಾರತ 162 ರನ್ಗಳ ಗುರಿ ನೀಡಿತು. ಆಸ್ಟ್ರೇಲಿಯಾ ತಂಡ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 3-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಎರಡನೇ ದಿನದಾಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್ಗಳಿಸಿದ್ದ ಭಾರತ ಮೂರನೇ ದಿನದಲ್ಲಿ ಕೇವಲ 16 ರನ್ ಸೇರಿಸಿ ಆಲೌಟ್ ಆಗುವ ಮೂಲಕ ಆಸ್ಟ್ರೇಲಿಯಾಗೆ 162 ರನ್ಗಳ ಗುರಿ ನೀಡಿತು.
ಈ ಗುರಿ ಬೆನ್ನಟ್ಟಿದ ಆಸೀಸ್ನ ಬ್ಯಾಟರ್ಗಳು ಆರಂಭದಲ್ಲಿ ಸುಲಭ ಗೆಲುವ ದಾಖಲಿಸುವ ಮುನ್ಸೂಚನೆ ನೀಡಿದರು. ಆದರೆ ಇಂಡಿಯಾದ ಬೌಲರ್ ಪ್ರಸಿದ್ಧ ಕೃಷ್ಣ, ಆಸ್ಟ್ರೇಲಿಯಾ ಬ್ಯಾಟರ್ಗಳನ್ನು ಪೆವಿಲಿಯನ್ ಹಾದಿ ಹಿಡಿಸುವ ಮೂಲಕ ಸ್ವಲ್ಪ ಮಟ್ಟಿಗೆ ಬಿಗಿ ಹಿಡಿತ ಸಾಧಿಸಿದರು.
ಆದರೆ ಕೊನೆಯಲ್ಲಿ ಟ್ರಾವಿಸ್ ಹೆಡ್ 34(38) ಹಾಗೂ ವೆಬ್ಸ್ಟರ್ 39(34) ರನ್ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ 10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧ ಈ ಹಿಂದಿನ 4 ಸರಣಿಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ತವರಿನಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ತಲಾ ಎರಡು ಸರಣಿಗಳಲ್ಲಿ ಭಾರತ ಗೆದ್ದಿತ್ತು.
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…