ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲುವ ಮೂಲಕ 10 ವರ್ಷದ ಬಳಿಕ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ.
BGT ಟ್ರೋಫಿಯ 5ನೇ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ಭಾರತ 162 ರನ್ಗಳ ಗುರಿ ನೀಡಿತು. ಆಸ್ಟ್ರೇಲಿಯಾ ತಂಡ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 3-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಎರಡನೇ ದಿನದಾಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್ಗಳಿಸಿದ್ದ ಭಾರತ ಮೂರನೇ ದಿನದಲ್ಲಿ ಕೇವಲ 16 ರನ್ ಸೇರಿಸಿ ಆಲೌಟ್ ಆಗುವ ಮೂಲಕ ಆಸ್ಟ್ರೇಲಿಯಾಗೆ 162 ರನ್ಗಳ ಗುರಿ ನೀಡಿತು.
ಈ ಗುರಿ ಬೆನ್ನಟ್ಟಿದ ಆಸೀಸ್ನ ಬ್ಯಾಟರ್ಗಳು ಆರಂಭದಲ್ಲಿ ಸುಲಭ ಗೆಲುವ ದಾಖಲಿಸುವ ಮುನ್ಸೂಚನೆ ನೀಡಿದರು. ಆದರೆ ಇಂಡಿಯಾದ ಬೌಲರ್ ಪ್ರಸಿದ್ಧ ಕೃಷ್ಣ, ಆಸ್ಟ್ರೇಲಿಯಾ ಬ್ಯಾಟರ್ಗಳನ್ನು ಪೆವಿಲಿಯನ್ ಹಾದಿ ಹಿಡಿಸುವ ಮೂಲಕ ಸ್ವಲ್ಪ ಮಟ್ಟಿಗೆ ಬಿಗಿ ಹಿಡಿತ ಸಾಧಿಸಿದರು.
ಆದರೆ ಕೊನೆಯಲ್ಲಿ ಟ್ರಾವಿಸ್ ಹೆಡ್ 34(38) ಹಾಗೂ ವೆಬ್ಸ್ಟರ್ 39(34) ರನ್ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ 10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧ ಈ ಹಿಂದಿನ 4 ಸರಣಿಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ತವರಿನಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ತಲಾ ಎರಡು ಸರಣಿಗಳಲ್ಲಿ ಭಾರತ ಗೆದ್ದಿತ್ತು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…