ಕ್ರೀಡೆ

ಸಿಡ್ನಿ ಟೆಸ್ಟ್ ಸೋತ ಭಾರತ: 10 ವರ್ಷಗಳ ನಂತರ ಕೈತಪ್ಪಿದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಭಾರತ ಸೋಲುವ ಮೂಲಕ 10 ವರ್ಷದ ಬಳಿಕ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯನ್ನು ಕಳೆದುಕೊಂಡಿದೆ.

BGT ಟ್ರೋಫಿಯ 5ನೇ ಟೆಸ್ಟ್‌ ಪಂದ್ಯದ ಮೂರನೇ ದಿನದಲ್ಲಿ ಭಾರತ 162 ರನ್‌ಗಳ ಗುರಿ ನೀಡಿತು. ಆಸ್ಟ್ರೇಲಿಯಾ ತಂಡ 4 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 3-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಎರಡನೇ ದಿನದಾಂತ್ಯಕ್ಕೆ 6 ವಿಕೆಟ್‌ ಕಳೆದುಕೊಂಡು 141 ರನ್‌ಗಳಿಸಿದ್ದ ಭಾರತ ಮೂರನೇ ದಿನದಲ್ಲಿ ಕೇವಲ 16 ರನ್‌ ಸೇರಿಸಿ ಆಲೌಟ್‌ ಆಗುವ ಮೂಲಕ ಆಸ್ಟ್ರೇಲಿಯಾಗೆ 162 ರನ್‌ಗಳ ಗುರಿ ನೀಡಿತು.

ಈ ಗುರಿ ಬೆನ್ನಟ್ಟಿದ ಆಸೀಸ್‌ನ ಬ್ಯಾಟರ್‌ಗಳು ಆರಂಭದಲ್ಲಿ ಸುಲಭ ಗೆಲುವ ದಾಖಲಿಸುವ ಮುನ್ಸೂಚನೆ ನೀಡಿದರು. ಆದರೆ ಇಂಡಿಯಾದ ಬೌಲರ್ ಪ್ರಸಿದ್ಧ ಕೃಷ್ಣ‌, ಆಸ್ಟ್ರೇಲಿಯಾ ಬ್ಯಾಟರ್‌ಗಳನ್ನು ಪೆವಿಲಿಯನ್‌ ಹಾದಿ ಹಿಡಿಸುವ ಮೂಲಕ ಸ್ವಲ್ಪ ಮಟ್ಟಿಗೆ ಬಿಗಿ ಹಿಡಿತ ಸಾಧಿಸಿದರು.

ಆದರೆ ಕೊನೆಯಲ್ಲಿ ಟ್ರಾವಿಸ್‌ ಹೆಡ್‌ 34(38) ಹಾಗೂ ವೆಬ್‌ಸ್ಟರ್‌ 39(34) ರನ್‌ ಗಳಿಸಿ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ 10 ವರ್ಷಗಳ ನಂತರ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧ ಈ ಹಿಂದಿನ 4 ಸರಣಿಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ತವರಿನಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ತಲಾ ಎರಡು ಸರಣಿಗಳಲ್ಲಿ ಭಾರತ ಗೆದ್ದಿತ್ತು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

9 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

9 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

9 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

9 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago