ಕ್ರೀಡೆ

ಮೊದಲ ಏಕದಿನದಲ್ಲೇ ಭಾರತಕ್ಕೆ ಸೋಲು ; ಮಂಕಾದ ರೋಹಿತ್-ಕೊಹ್ಲಿ

ಪರ್ತ್: ಪ್ರವಾಸಿ ಭಾರತ ವಿರುದ್ಧ ನಡೆದ ಮಳೆ ಬಾಧಿತ ಮೊದಲ ಏಕದಿನ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದೆ.

ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ೧-೦ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಪರ್ತ್‌ನಲ್ಲಿ ಮಳೆಯಿಂದಾಗಿ ೨೬ ಓವರ್‌ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ೨೬ ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ ೧೩೬ ರನ್ ಗಳಿಸಲಷ್ಟೇ ಸಾಧ್ಯವಾಯಿತು. ಬಳಿಕ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ ಗುರಿ ಮರುನಿಗದಿಪಡಿಸಲಾಯಿತು. ೧೩೧ ರನ್ ಬೆನ್ನಟ್ಟಿದ ಆಸೀಸ್ ೨೧.೧ ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು. ನಾಯಕ ಮಿಷೆಲ್ ಮಾರ್ಷ್ ಔಟಾಗದೆ ೪೬ ಹಾಗೂ ವಿಕೆಟ್ ಕೀಪರ್, ಬ್ಯಾಟರ್ ಜೋಶ್ ಫಿಲಿಫ್ ೩೭ರನ್ ಗಳಿಸಿದರು.

ಇದನ್ನು ಓದಿ: ಭಾರೀ ವಿರೋಧದ ಮಧ್ಯೆ ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ

ಮಂಕಾದ ರೋಹಿತ್, ವಿರಾಟ್…
ಈ ಮೊದಲು ಸುದೀರ್ಘ ಅವಽಯ ಬಳಿಕ ತಂಡಕ್ಕೆ ಮರಳಿದ್ದ ಭಾರತದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಮಿಂಚಲು ಸಾಧ್ಯವಾಗಲಿಲ್ಲ. ಮಳೆಯಿಂದಾಗಿ ಪಂದ್ಯಕ್ಕೆ ಹಲವು ಬಾರಿ ಅಡಚಣೆಯಾದ ಪರಿಣಾಮ ಓವರ್‌ಗಳ ಸಂಖ್ಯೆಯನ್ನು ಮೊದಲು ೩೫ಕ್ಕೆ ಬಳಿಕ ೨೬ಕ್ಕೆ ಇಳಿಸಲಾಯಿತು.

ರೋಹಿತ್ ಶರ್ಮಾ ೮ ಹಾಗೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್ ಆಗಿ ನಿರಾಸೆ ಮೂಡಿಸಿದರು. ನಾಯಕ ಶುಭ್ಮನ್‌ಗಿಲ್ (೧೦) ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ (೧೧) ಸಹ ವೈಫಲ್ಯ ಕಂಡರು. ಕೆ.ಎಲ್. ರಾಹುಲ್ (೩೮) ಹಾಗೂ ಅಕ್ಷರ್ ಪಟೇಲ್ (೩೧) ಉಪಯುಕ್ತ ಇನಿಂಗ್ಸ್ ಕಟ್ಟುವ ಮೂಲಕ ತಂಡವನ್ನು ಗೌರವಯುತ ಮೊತ್ತದತ್ತ ಮುನ್ನಡೆಸಿದರು. ಕೊನೆಯಲ್ಲಿ ನಿತೀಶ್ ರೆಡ್ಡಿ ೧೧ ಎಸೆತಗಳಲ್ಲಿ ಎರಡು ಸಿಕ್ಸರ್ ನೆರವಿನಿಂದ ೧೯ ರನ್ ಗಳಿಸಿ ಔಟಾಗದೆ ಉಳಿದರು. ವಾಷಿಂಗ್ಟನ್ ಸುಂದರ್ ೧೦ ರನ್ ಗಳಿಸಿದರು. ಆಸ್ಟ್ರೇಲಿಯಾದ ಪರ ಜೋಶ್ ಹ್ಯಾಜಲ್ವುಡ್, ಮಿಚೆಲ್ ಒವೆನ್ ಹಾಗೂ ಮ್ಯಾಥ್ಯೂ ಕುಹ್ನೆಮನ್ ತಲಾ ಎರಡು ವಿಕೆಟ್ ಗಳಿಸಿದರು. ಸರಣಿಯ ಎರಡನೇ ಪಂದ್ಯ ಅಕ್ಟೋಬರ್ ೨೩, ಗುರುವಾರ ಅಡಿಲೇಡ್‌ನಲ್ಲಿ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

22 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

52 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

55 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

2 hours ago