ಕ್ರೀಡೆ

ಮೊದಲ ಏಕದಿನದಲ್ಲೇ ಭಾರತಕ್ಕೆ ಸೋಲು ; ಮಂಕಾದ ರೋಹಿತ್-ಕೊಹ್ಲಿ

ಪರ್ತ್: ಪ್ರವಾಸಿ ಭಾರತ ವಿರುದ್ಧ ನಡೆದ ಮಳೆ ಬಾಧಿತ ಮೊದಲ ಏಕದಿನ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದೆ.

ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ೧-೦ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಪರ್ತ್‌ನಲ್ಲಿ ಮಳೆಯಿಂದಾಗಿ ೨೬ ಓವರ್‌ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ೨೬ ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ ೧೩೬ ರನ್ ಗಳಿಸಲಷ್ಟೇ ಸಾಧ್ಯವಾಯಿತು. ಬಳಿಕ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ ಗುರಿ ಮರುನಿಗದಿಪಡಿಸಲಾಯಿತು. ೧೩೧ ರನ್ ಬೆನ್ನಟ್ಟಿದ ಆಸೀಸ್ ೨೧.೧ ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು. ನಾಯಕ ಮಿಷೆಲ್ ಮಾರ್ಷ್ ಔಟಾಗದೆ ೪೬ ಹಾಗೂ ವಿಕೆಟ್ ಕೀಪರ್, ಬ್ಯಾಟರ್ ಜೋಶ್ ಫಿಲಿಫ್ ೩೭ರನ್ ಗಳಿಸಿದರು.

ಇದನ್ನು ಓದಿ: ಭಾರೀ ವಿರೋಧದ ಮಧ್ಯೆ ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ

ಮಂಕಾದ ರೋಹಿತ್, ವಿರಾಟ್…
ಈ ಮೊದಲು ಸುದೀರ್ಘ ಅವಽಯ ಬಳಿಕ ತಂಡಕ್ಕೆ ಮರಳಿದ್ದ ಭಾರತದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಮಿಂಚಲು ಸಾಧ್ಯವಾಗಲಿಲ್ಲ. ಮಳೆಯಿಂದಾಗಿ ಪಂದ್ಯಕ್ಕೆ ಹಲವು ಬಾರಿ ಅಡಚಣೆಯಾದ ಪರಿಣಾಮ ಓವರ್‌ಗಳ ಸಂಖ್ಯೆಯನ್ನು ಮೊದಲು ೩೫ಕ್ಕೆ ಬಳಿಕ ೨೬ಕ್ಕೆ ಇಳಿಸಲಾಯಿತು.

ರೋಹಿತ್ ಶರ್ಮಾ ೮ ಹಾಗೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್ ಆಗಿ ನಿರಾಸೆ ಮೂಡಿಸಿದರು. ನಾಯಕ ಶುಭ್ಮನ್‌ಗಿಲ್ (೧೦) ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ (೧೧) ಸಹ ವೈಫಲ್ಯ ಕಂಡರು. ಕೆ.ಎಲ್. ರಾಹುಲ್ (೩೮) ಹಾಗೂ ಅಕ್ಷರ್ ಪಟೇಲ್ (೩೧) ಉಪಯುಕ್ತ ಇನಿಂಗ್ಸ್ ಕಟ್ಟುವ ಮೂಲಕ ತಂಡವನ್ನು ಗೌರವಯುತ ಮೊತ್ತದತ್ತ ಮುನ್ನಡೆಸಿದರು. ಕೊನೆಯಲ್ಲಿ ನಿತೀಶ್ ರೆಡ್ಡಿ ೧೧ ಎಸೆತಗಳಲ್ಲಿ ಎರಡು ಸಿಕ್ಸರ್ ನೆರವಿನಿಂದ ೧೯ ರನ್ ಗಳಿಸಿ ಔಟಾಗದೆ ಉಳಿದರು. ವಾಷಿಂಗ್ಟನ್ ಸುಂದರ್ ೧೦ ರನ್ ಗಳಿಸಿದರು. ಆಸ್ಟ್ರೇಲಿಯಾದ ಪರ ಜೋಶ್ ಹ್ಯಾಜಲ್ವುಡ್, ಮಿಚೆಲ್ ಒವೆನ್ ಹಾಗೂ ಮ್ಯಾಥ್ಯೂ ಕುಹ್ನೆಮನ್ ತಲಾ ಎರಡು ವಿಕೆಟ್ ಗಳಿಸಿದರು. ಸರಣಿಯ ಎರಡನೇ ಪಂದ್ಯ ಅಕ್ಟೋಬರ್ ೨೩, ಗುರುವಾರ ಅಡಿಲೇಡ್‌ನಲ್ಲಿ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

4 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

8 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

24 hours ago