ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ 3ನೇ ಹಾಗೂ ಕೊನೆಯ ಏಕದಿನ ಪಂದ್ಯ ಮಳೆಗೆ ಆಹುತಿಯಾಗಿದೆ. ಈ ಮೂಲಕ ಕಿವೀಸ್ ಪಡೆ ಏಕದಿನ ಸರಣಿಯನ್ನು 1-0 ಅಂತರದಿಂದ ತಮ್ಮದಾಗಿಸಿಕೊಂಡಿದೆ. ಈ ಸರಣಿಗೂ ಮುನ್ನ ನಡೆದ ಟಿ20 ಸರಣಿಯನ್ನು ನ್ಯೂಜಿಲೆಂಡ್ ತಂಡ ಕಳೆದುಕೊಂಡಿತ್ತು. ಆದರೆ ಏಕದಿನ ಸರಣಿಯಲ್ಲಿ ಸಿಕ್ಕ ಮೊದಲ ಗೆಲುವು ಕೇನ್ ಪಡೆಯನ್ನು ಸರಣಿ ಗೆಲ್ಲುವಂತೆ ಮಾಡಿತು. 3ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾದ ಸೋಲು ಖಚಿತವಾಗಿತ್ತು. ಆದರೆ ಈ ಪಂದ್ಯಕ್ಕೆ ಅಡ್ಡಿಪಡಿಸಿದ ವರುಣ ಧವನ್ ಪಡೆಯ ಸರಣಿ ಸೋಲಿನ ತೀವ್ರತೆಯನ್ನು ಕೊಂಚ ಕಡಿತಗೊಳಿಸಿದ. ಈ ಪಂದ್ಯದಲ್ಲಿ ಮೊದಲಯ ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 219 ರನ್ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆ ನೀರು ಕುಡಿದಷ್ಟು ಸುಲಭವಾಗಿ ಟಾರ್ಗೆಟ್ ಬೆನ್ನಟ್ಟಿತ್ತು. ಆದರೆ ಕಿವೀಸ್ ಇನ್ನಿಂಗ್ಸ್ನ 18ನೇ ಓವರ್ನಲ್ಲಿ ಎಂಟ್ರಿಕೊಟ್ಟ ವರುಣ ಪಂದ್ಯವನ್ನು ನಿಲ್ಲಿಸುವಲ್ಲಿ ಯಶಸ್ವಿಯಾದ.
ಈ ಸರಣಿಯುದ್ದಕ್ಕೂ ಟಾಸ್ ಗೆಲ್ಲುವಲ್ಲಿ ವಿಫಲರಾದ ನಾಯಕ ಧವನ್ ಕೊನೆಯ ಪಂದ್ಯದಲ್ಲೂ ಟಾಸ್ ಸೋತರು. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎಂದಿನಂತೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತರು ಉತ್ತಮ ಆರಂಭ ಮಾಡಿದ್ದ ಟೀಂ ಇಂಡಿಯಾ ಪಂದ್ಯದಲ್ಲಿ ಎಡವಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ಗಿಲ್ ಹಾಗೂ ಧವನ್ ರನ್ ಗಳಿಸಲು ಪರದಾಡಿದರು. ಅದರಲ್ಲೂ ಉತ್ತಮ ಫಾರ್ಮ್ನಲ್ಲಿದ್ದ ಗಿಲ್ಗೆ ಮೊದಲ 6 ಓವರ್ಗಳಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿದ ಭಾರತ ಒಂದರ ಹಿಂದೆ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.
ಈ ಪಂದ್ಯದಲ್ಲಿ ಬರೋಬ್ಬರಿ 22 ಎಸೆತಗಳನ್ನು ಎದುರಿಸಿದ ಗಿಲ್ ಕೇವಲ 13 ರನ್ ಗಳಿಸಲಷ್ಟೇ ಶಕ್ತರಾದರು. ಗಿಲ್ ವಿಕೆಟ್ ಬಳಿಕ ನಾಯಕ ಧವನ್ ಕೂಡ ಕ್ರೀಸ್ನಲ್ಲಿ ನಿಂತಿದ್ದು ಸಾಕೆನಿಸಿ 45 ಎಸೆತಗಳಲ್ಲಿ 28 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ಏಕದಿನ ಸರಣಿಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಅಯ್ಯರ್ ಮಾತ್ರ ಈ ಪಂದ್ಯದಲ್ಲೂ ತಮ್ಮ ಎಂದಿನ ಆಟವನ್ನು ಮುಂದುವರೆಸಿದರು. ಪಂತ್ ಜೊತೆಗೂಡಿ ನಿದಾನವಾಗಿ ಟೀಂ ಇಂಡಿಯಾ ಇನ್ನಿಂಗ್ಸ್ ಕಟ್ಟಿದರು. ಆದರೆ ಸತತ ಅವಕಾಶಗಳ ಹೊರತಾಗಿಯೂ ಉಪನಾಯಕ ಪಂತ್ ರನ್ ಗಳಿಸುವಲ್ಲಿ ಎಡವಿದರು. ಈ ಸರಣಿಯುದ್ದಕ್ಕೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಪಂತ್ ಈ ಪಂದ್ಯದಲ್ಲೂ ಕೇವಲ 10 ರನ್ಗಳಿಗೆ ಸುಸ್ತಾದರು. ಆ ಬಳಿಕ ಬಂದ ಸೂರ್ಯಕುಮಾರ್ ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.
ಅಯ್ಯರ್ ಕೂಡ ಅರ್ಧಶತಕದಂಚಿನಲ್ಲಿ ಎಡವಿ 49 ರನ್ಗಳಿಗೆ ವಿಕೆಟ್ ಒಪ್ಪಿಸಿದರು. ಮೊದಲ ಏಕದಿನ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ವಾಷಿಂಗ್ಟನ್ ಸುಂದರ್, ಈ ಪಂದ್ಯದಲ್ಲೂ ಸಮಯೋಜಿನ ಇನ್ನಿಂಗ್ಸ್ ಆಡಿದರು. ಒಂದೆಡೆ ವಿಕೆಟ್ ಉರುಳುತ್ತಿದ್ದರು ಬಾಲಗೊಂಚಿಗಳ ಜೊತೆಗೂಡಿ ಅದ್ಭುತ ಅರ್ಧಶತಕ ಸಿಡಿಸಿ ಮಿಂಚಿದರು. ತಂಡದ ಪರ ಸುಂದರ್ ಹಾಗೂ ಶ್ರೇಯಸ್ ಬಿಟ್ಟರೆ ಮತ್ತ್ಯಾವ ಆಟಗಾರನು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಅಂತಿಮವಾಗಿ ಟೀಂ ಇಂಡಿಯಾ ತನ್ನೇಲ್ಲ ವಿಕೆಟ್ ಕಳೆದುಕೊಂಡು 219 ರನ್ ಗಳಿಸಲಷ್ಟೇ ಶಕ್ತವಾಯಿತು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…