ಕ್ರೀಡೆ

ನ್ಯೂಜಿಲೆಂಡ್‌ ವಿರುದ್ಧ ಏಕದಿನ ಸರಣಿ ಸೋತ ಭಾರತ

ಮೂರನೇ ಪಂದ್ಯಕ್ಕೂ ಮಳೆ ಅಡ್ಡಿ, 1-0 ಅಂತರದಿಂದ ಸರಣಿ ಗೆದ್ದ ಕಾಂಗರೂಗಳು

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ 3ನೇ ಹಾಗೂ ಕೊನೆಯ ಏಕದಿನ ಪಂದ್ಯ ಮಳೆಗೆ ಆಹುತಿಯಾಗಿದೆ. ಈ ಮೂಲಕ ಕಿವೀಸ್ ಪಡೆ ಏಕದಿನ ಸರಣಿಯನ್ನು 1-0 ಅಂತರದಿಂದ ತಮ್ಮದಾಗಿಸಿಕೊಂಡಿದೆ. ಈ ಸರಣಿಗೂ ಮುನ್ನ ನಡೆದ ಟಿ20 ಸರಣಿಯನ್ನು ನ್ಯೂಜಿಲೆಂಡ್ ತಂಡ ಕಳೆದುಕೊಂಡಿತ್ತು. ಆದರೆ ಏಕದಿನ ಸರಣಿಯಲ್ಲಿ ಸಿಕ್ಕ ಮೊದಲ ಗೆಲುವು ಕೇನ್ ಪಡೆಯನ್ನು ಸರಣಿ ಗೆಲ್ಲುವಂತೆ ಮಾಡಿತು. 3ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾದ ಸೋಲು ಖಚಿತವಾಗಿತ್ತು. ಆದರೆ ಈ ಪಂದ್ಯಕ್ಕೆ ಅಡ್ಡಿಪಡಿಸಿದ ವರುಣ ಧವನ್ ಪಡೆಯ ಸರಣಿ ಸೋಲಿನ ತೀವ್ರತೆಯನ್ನು ಕೊಂಚ ಕಡಿತಗೊಳಿಸಿದ. ಈ ಪಂದ್ಯದಲ್ಲಿ ಮೊದಲಯ ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 219 ರನ್​ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆ ನೀರು ಕುಡಿದಷ್ಟು ಸುಲಭವಾಗಿ ಟಾರ್ಗೆಟ್ ಬೆನ್ನಟ್ಟಿತ್ತು. ಆದರೆ ಕಿವೀಸ್ ಇನ್ನಿಂಗ್ಸ್​ನ 18ನೇ ಓವರ್​ನಲ್ಲಿ ಎಂಟ್ರಿಕೊಟ್ಟ ವರುಣ ಪಂದ್ಯವನ್ನು ನಿಲ್ಲಿಸುವಲ್ಲಿ ಯಶಸ್ವಿಯಾದ.

ಈ ಸರಣಿಯುದ್ದಕ್ಕೂ ಟಾಸ್ ಗೆಲ್ಲುವಲ್ಲಿ ವಿಫಲರಾದ ನಾಯಕ ಧವನ್ ಕೊನೆಯ ಪಂದ್ಯದಲ್ಲೂ ಟಾಸ್ ಸೋತರು. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎಂದಿನಂತೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತರು ಉತ್ತಮ ಆರಂಭ ಮಾಡಿದ್ದ ಟೀಂ ಇಂಡಿಯಾ ಪಂದ್ಯದಲ್ಲಿ ಎಡವಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ಗಿಲ್ ಹಾಗೂ ಧವನ್ ರನ್ ಗಳಿಸಲು ಪರದಾಡಿದರು. ಅದರಲ್ಲೂ ಉತ್ತಮ ಫಾರ್ಮ್​ನಲ್ಲಿದ್ದ ಗಿಲ್​ಗೆ ಮೊದಲ 6 ಓವರ್​ಗಳಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿದ ಭಾರತ ಒಂದರ ಹಿಂದೆ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಈ ಪಂದ್ಯದಲ್ಲಿ ಬರೋಬ್ಬರಿ 22 ಎಸೆತಗಳನ್ನು ಎದುರಿಸಿದ ಗಿಲ್ ಕೇವಲ 13 ರನ್ ಗಳಿಸಲಷ್ಟೇ ಶಕ್ತರಾದರು. ಗಿಲ್ ವಿಕೆಟ್ ಬಳಿಕ ನಾಯಕ ಧವನ್ ಕೂಡ ಕ್ರೀಸ್​ನಲ್ಲಿ ನಿಂತಿದ್ದು ಸಾಕೆನಿಸಿ 45 ಎಸೆತಗಳಲ್ಲಿ 28 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ಏಕದಿನ ಸರಣಿಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಅಯ್ಯರ್ ಮಾತ್ರ ಈ ಪಂದ್ಯದಲ್ಲೂ ತಮ್ಮ ಎಂದಿನ ಆಟವನ್ನು ಮುಂದುವರೆಸಿದರು. ಪಂತ್ ಜೊತೆಗೂಡಿ ನಿದಾನವಾಗಿ ಟೀಂ ಇಂಡಿಯಾ ಇನ್ನಿಂಗ್ಸ್ ಕಟ್ಟಿದರು. ಆದರೆ ಸತತ ಅವಕಾಶಗಳ ಹೊರತಾಗಿಯೂ ಉಪನಾಯಕ ಪಂತ್ ರನ್ ಗಳಿಸುವಲ್ಲಿ ಎಡವಿದರು. ಈ ಸರಣಿಯುದ್ದಕ್ಕೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಪಂತ್ ಈ ಪಂದ್ಯದಲ್ಲೂ ಕೇವಲ 10 ರನ್​ಗಳಿಗೆ ಸುಸ್ತಾದರು. ಆ ಬಳಿಕ ಬಂದ ಸೂರ್ಯಕುಮಾರ್ ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಅಯ್ಯರ್ ಕೂಡ ಅರ್ಧಶತಕದಂಚಿನಲ್ಲಿ ಎಡವಿ 49 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಮೊದಲ ಏಕದಿನ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ವಾಷಿಂಗ್ಟನ್ ಸುಂದರ್, ಈ ಪಂದ್ಯದಲ್ಲೂ ಸಮಯೋಜಿನ ಇನ್ನಿಂಗ್ಸ್ ಆಡಿದರು. ಒಂದೆಡೆ ವಿಕೆಟ್ ಉರುಳುತ್ತಿದ್ದರು ಬಾಲಗೊಂಚಿಗಳ ಜೊತೆಗೂಡಿ ಅದ್ಭುತ ಅರ್ಧಶತಕ ಸಿಡಿಸಿ ಮಿಂಚಿದರು. ತಂಡದ ಪರ ಸುಂದರ್ ಹಾಗೂ ಶ್ರೇಯಸ್ ಬಿಟ್ಟರೆ ಮತ್ತ್ಯಾವ ಆಟಗಾರನು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಅಂತಿಮವಾಗಿ ಟೀಂ ಇಂಡಿಯಾ ತನ್ನೇಲ್ಲ ವಿಕೆಟ್ ಕಳೆದುಕೊಂಡು 219 ರನ್ ಗಳಿಸಲಷ್ಟೇ ಶಕ್ತವಾಯಿತು.

andolana

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

7 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

7 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

7 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

7 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

8 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

8 hours ago