ಪ್ಯಾರಿಸ್: ಭಾರತ ಹಾಕಿ ತಂಡ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ನಲ್ಲಿ ಫೈನಲ್ಸ್ ತಲುಪುವ ಭಾರತದ ಕನಸು ನುಚ್ಚು ನೂರಾಗಿದೆ. ಜರ್ಮನ್ ವಿರುದ್ಧ ರೋಚಕ ಹಣಾಹಣೆಯಲ್ಲಿ ಸೋತ ಭಾರತ ತಂಡ ಚಿನ್ನ ಗೆಲ್ಲುವ ಕನಸು ಕನಸಾಗೇ ಉಳಿದಿದೆ. ಭಾರತ ತಂಡದ ವಿರುದ್ಧ ಗೆದ್ದ ಜರ್ಮನಿ ಫೈನಲ್ಸ್ಗೆ ಲಗ್ಗೆಯಿಟ್ಟಿದೆ.
ಇಂದು (ಮಂಗಳವಾರ) ನಡೆದ ಸೆಮಿ ಫೈನಲ್ಸ್ ಪಂದ್ಯದಲ್ಲಿ ಜರ್ಮನಿ ತಂಡವನ್ನು ದಿಟ್ಟ ತನದಿಂದ ಎದುರಿಸುವಲ್ಲಿ ವಿಫಲವಾದ ಭಾರತ ತಂಡ ಗೆಲ್ಲುವ ಅವಕಾಶ ಕೈಚೆಲ್ಲಿತು.
ಪಂದ್ಯ ಆರಂಭದ ವೇಳೆಯಲ್ಲಿ ಭಾರತ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ 7ನೇ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ತಂದು ಕೊಟ್ಟರು. ಇತ್ತ ಎದುರಾಳಿ ಜರ್ಮನ್ಗೆ ಸಿಕ್ಕ ಎರಡು ಪೆನಾಲ್ಟಿ ಅವಕಾಶವನ್ನು ಬಳಸಿಕೊಂಡು ಎರಡು ಗೋಲುಗಳನ್ನು ಗಳಿಸಿದರು. ಮೊದಲ ವಿರಾಮದ ಅಂತ್ಯಕ್ಕೆ ಜರ್ಮನಿ 2 ಹಾಗೂ ಭಾರತ 1 ಗೋಲು ಗಳಿಸಿ ಹಿನ್ನಡೆ ಅನುಭವಿಸತ್ತು.
ಮೊದಲಾರ್ಧದ ಬಳಿಕ ಪುಟಿದೆದ್ದ ಭಾರತ ತಂಡ ಎದುರಾಳಿಗೆ ತಕ್ಕ ಉತ್ತರ ನೀಡಿದರು. 36 ನೇ ನಿಮಿಷದಲ್ಲಿ ಗೋಲು ಬಾರಿಸಿದ ಸುಖ್ಜೀತ್ ಸಿಂಗ್ ತಂಡಕ್ಕೆ ಆಸರೆಯಾದರು.
ಉಳಿದ ಮೂವತ್ತು ನಿಮಿಷಗಳ ಕಾಲ ಒಂದೇ ಒಂದು ಗೋಲು ಗಳಿಸಲು ಇತ್ತಂಡಗಳು ಪರದಾಡಿದರು. ಜರ್ಮನ್ಗೆ ಎರಡು ಬಾರಿ ಅವಕಾಶ ಸಿಕ್ಕರೂ ಗೋಲು ಗಳಿಸುವಲ್ಲಿ ವಿಫಲರಾದರು. ಆದರೆ ಕೊನೆಯ 6 ನಿಮಿಷಗಳು ಬಾಕಿ ಇರುವಾಗ ಜರ್ಮನಿಯ ಮಾರ್ಕೊ 54ನೇ ನಿಮಿಷದಲ್ಲಿ ರೋಚಕ ಗೋಲು ಗಳಿಸಿ ಜರ್ಮನಿಗೆ ಮುನ್ನಡೆ ತಂದುಕೊಡುವ ಮೂಲಕ ಜರ್ಮನಿ ತಂಡ ಫೈನಲ್ಸ್ ತಲುಪಲು ಸಹಕರಿಸಿದರು.
ಕೊನೆವರೆಗೂ ರೋಚಕವಾಗಿ ಹೋರಾಟ ಮಾಡಿದ ಭಾರತ ತಂಡ ಫೈನಲ್ಸ್ ತಲುಪುವಲ್ಲಿ ವಿಫಲವಾಯಿತು.
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…