ಕ್ರೀಡೆ

Paris Olympics 2024: ಹಾಕಿಯಲ್ಲಿ ಮುಗ್ಗರಿಸಿದ ಭಾರತ; ಫೈನಲ್ಸ್‌ಗೆ ಲಗ್ಗೆಯಿಟ್ಟ ಜರ್ಮನ್‌

ಪ್ಯಾರಿಸ್‌: ಭಾರತ ಹಾಕಿ ತಂಡ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಫೈನಲ್ಸ್‌ ತಲುಪುವ ಭಾರತದ ಕನಸು ನುಚ್ಚು ನೂರಾಗಿದೆ. ಜರ್ಮನ್‌ ವಿರುದ್ಧ ರೋಚಕ ಹಣಾಹಣೆಯಲ್ಲಿ ಸೋತ ಭಾರತ ತಂಡ ಚಿನ್ನ ಗೆಲ್ಲುವ ಕನಸು ಕನಸಾಗೇ ಉಳಿದಿದೆ. ಭಾರತ ತಂಡದ ವಿರುದ್ಧ ಗೆದ್ದ ಜರ್ಮನಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದೆ.

ಇಂದು (ಮಂಗಳವಾರ) ನಡೆದ ಸೆಮಿ ಫೈನಲ್ಸ್‌ ಪಂದ್ಯದಲ್ಲಿ ಜರ್ಮನಿ ತಂಡವನ್ನು ದಿಟ್ಟ ತನದಿಂದ ಎದುರಿಸುವಲ್ಲಿ ವಿಫಲವಾದ ಭಾರತ ತಂಡ ಗೆಲ್ಲುವ ಅವಕಾಶ ಕೈಚೆಲ್ಲಿತು.

ಪಂದ್ಯ ಆರಂಭದ ವೇಳೆಯಲ್ಲಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ 7ನೇ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ತಂದು ಕೊಟ್ಟರು. ಇತ್ತ ಎದುರಾಳಿ ಜರ್ಮನ್‌ಗೆ ಸಿಕ್ಕ ಎರಡು ಪೆನಾಲ್ಟಿ ಅವಕಾಶವನ್ನು ಬಳಸಿಕೊಂಡು ಎರಡು ಗೋಲುಗಳನ್ನು ಗಳಿಸಿದರು. ಮೊದಲ ವಿರಾಮದ ಅಂತ್ಯಕ್ಕೆ ಜರ್ಮನಿ 2 ಹಾಗೂ ಭಾರತ 1 ಗೋಲು ಗಳಿಸಿ ಹಿನ್ನಡೆ ಅನುಭವಿಸತ್ತು.

ಮೊದಲಾರ್ಧದ ಬಳಿಕ ಪುಟಿದೆದ್ದ ಭಾರತ ತಂಡ ಎದುರಾಳಿಗೆ ತಕ್ಕ ಉತ್ತರ ನೀಡಿದರು. 36 ನೇ ನಿಮಿಷದಲ್ಲಿ ಗೋಲು ಬಾರಿಸಿದ ಸುಖ್‌ಜೀತ್‌ ಸಿಂಗ್‌ ತಂಡಕ್ಕೆ ಆಸರೆಯಾದರು.

ಉಳಿದ ಮೂವತ್ತು ನಿಮಿಷಗಳ ಕಾಲ ಒಂದೇ ಒಂದು ಗೋಲು ಗಳಿಸಲು ಇತ್ತಂಡಗಳು ಪರದಾಡಿದರು. ಜರ್ಮನ್‌ಗೆ ಎರಡು ಬಾರಿ ಅವಕಾಶ ಸಿಕ್ಕರೂ ಗೋಲು ಗಳಿಸುವಲ್ಲಿ ವಿಫಲರಾದರು. ಆದರೆ ಕೊನೆಯ 6 ನಿಮಿಷಗಳು ಬಾಕಿ ಇರುವಾಗ ಜರ್ಮನಿಯ ಮಾರ್ಕೊ 54ನೇ ನಿಮಿಷದಲ್ಲಿ ರೋಚಕ ಗೋಲು ಗಳಿಸಿ ಜರ್ಮನಿಗೆ ಮುನ್ನಡೆ ತಂದುಕೊಡುವ ಮೂಲಕ ಜರ್ಮನಿ ತಂಡ ಫೈನಲ್ಸ್‌ ತಲುಪಲು ಸಹಕರಿಸಿದರು.

ಕೊನೆವರೆಗೂ ರೋಚಕವಾಗಿ ಹೋರಾಟ ಮಾಡಿದ ಭಾರತ ತಂಡ ಫೈನಲ್ಸ್‌ ತಲುಪುವಲ್ಲಿ ವಿಫಲವಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

49 mins ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

2 hours ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

3 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

3 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

3 hours ago