ಕ್ರೀಡೆ

Paris Olympics 2024: ಹಾಕಿಯಲ್ಲಿ ಮುಗ್ಗರಿಸಿದ ಭಾರತ; ಫೈನಲ್ಸ್‌ಗೆ ಲಗ್ಗೆಯಿಟ್ಟ ಜರ್ಮನ್‌

ಪ್ಯಾರಿಸ್‌: ಭಾರತ ಹಾಕಿ ತಂಡ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಫೈನಲ್ಸ್‌ ತಲುಪುವ ಭಾರತದ ಕನಸು ನುಚ್ಚು ನೂರಾಗಿದೆ. ಜರ್ಮನ್‌ ವಿರುದ್ಧ ರೋಚಕ ಹಣಾಹಣೆಯಲ್ಲಿ ಸೋತ ಭಾರತ ತಂಡ ಚಿನ್ನ ಗೆಲ್ಲುವ ಕನಸು ಕನಸಾಗೇ ಉಳಿದಿದೆ. ಭಾರತ ತಂಡದ ವಿರುದ್ಧ ಗೆದ್ದ ಜರ್ಮನಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದೆ.

ಇಂದು (ಮಂಗಳವಾರ) ನಡೆದ ಸೆಮಿ ಫೈನಲ್ಸ್‌ ಪಂದ್ಯದಲ್ಲಿ ಜರ್ಮನಿ ತಂಡವನ್ನು ದಿಟ್ಟ ತನದಿಂದ ಎದುರಿಸುವಲ್ಲಿ ವಿಫಲವಾದ ಭಾರತ ತಂಡ ಗೆಲ್ಲುವ ಅವಕಾಶ ಕೈಚೆಲ್ಲಿತು.

ಪಂದ್ಯ ಆರಂಭದ ವೇಳೆಯಲ್ಲಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ 7ನೇ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ತಂದು ಕೊಟ್ಟರು. ಇತ್ತ ಎದುರಾಳಿ ಜರ್ಮನ್‌ಗೆ ಸಿಕ್ಕ ಎರಡು ಪೆನಾಲ್ಟಿ ಅವಕಾಶವನ್ನು ಬಳಸಿಕೊಂಡು ಎರಡು ಗೋಲುಗಳನ್ನು ಗಳಿಸಿದರು. ಮೊದಲ ವಿರಾಮದ ಅಂತ್ಯಕ್ಕೆ ಜರ್ಮನಿ 2 ಹಾಗೂ ಭಾರತ 1 ಗೋಲು ಗಳಿಸಿ ಹಿನ್ನಡೆ ಅನುಭವಿಸತ್ತು.

ಮೊದಲಾರ್ಧದ ಬಳಿಕ ಪುಟಿದೆದ್ದ ಭಾರತ ತಂಡ ಎದುರಾಳಿಗೆ ತಕ್ಕ ಉತ್ತರ ನೀಡಿದರು. 36 ನೇ ನಿಮಿಷದಲ್ಲಿ ಗೋಲು ಬಾರಿಸಿದ ಸುಖ್‌ಜೀತ್‌ ಸಿಂಗ್‌ ತಂಡಕ್ಕೆ ಆಸರೆಯಾದರು.

ಉಳಿದ ಮೂವತ್ತು ನಿಮಿಷಗಳ ಕಾಲ ಒಂದೇ ಒಂದು ಗೋಲು ಗಳಿಸಲು ಇತ್ತಂಡಗಳು ಪರದಾಡಿದರು. ಜರ್ಮನ್‌ಗೆ ಎರಡು ಬಾರಿ ಅವಕಾಶ ಸಿಕ್ಕರೂ ಗೋಲು ಗಳಿಸುವಲ್ಲಿ ವಿಫಲರಾದರು. ಆದರೆ ಕೊನೆಯ 6 ನಿಮಿಷಗಳು ಬಾಕಿ ಇರುವಾಗ ಜರ್ಮನಿಯ ಮಾರ್ಕೊ 54ನೇ ನಿಮಿಷದಲ್ಲಿ ರೋಚಕ ಗೋಲು ಗಳಿಸಿ ಜರ್ಮನಿಗೆ ಮುನ್ನಡೆ ತಂದುಕೊಡುವ ಮೂಲಕ ಜರ್ಮನಿ ತಂಡ ಫೈನಲ್ಸ್‌ ತಲುಪಲು ಸಹಕರಿಸಿದರು.

ಕೊನೆವರೆಗೂ ರೋಚಕವಾಗಿ ಹೋರಾಟ ಮಾಡಿದ ಭಾರತ ತಂಡ ಫೈನಲ್ಸ್‌ ತಲುಪುವಲ್ಲಿ ವಿಫಲವಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago