ಕ್ರೀಡೆ

Paris Olympics 2024: ಹಾಕಿಯಲ್ಲಿ ಮುಗ್ಗರಿಸಿದ ಭಾರತ; ಫೈನಲ್ಸ್‌ಗೆ ಲಗ್ಗೆಯಿಟ್ಟ ಜರ್ಮನ್‌

ಪ್ಯಾರಿಸ್‌: ಭಾರತ ಹಾಕಿ ತಂಡ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಫೈನಲ್ಸ್‌ ತಲುಪುವ ಭಾರತದ ಕನಸು ನುಚ್ಚು ನೂರಾಗಿದೆ. ಜರ್ಮನ್‌ ವಿರುದ್ಧ ರೋಚಕ ಹಣಾಹಣೆಯಲ್ಲಿ ಸೋತ ಭಾರತ ತಂಡ ಚಿನ್ನ ಗೆಲ್ಲುವ ಕನಸು ಕನಸಾಗೇ ಉಳಿದಿದೆ. ಭಾರತ ತಂಡದ ವಿರುದ್ಧ ಗೆದ್ದ ಜರ್ಮನಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದೆ.

ಇಂದು (ಮಂಗಳವಾರ) ನಡೆದ ಸೆಮಿ ಫೈನಲ್ಸ್‌ ಪಂದ್ಯದಲ್ಲಿ ಜರ್ಮನಿ ತಂಡವನ್ನು ದಿಟ್ಟ ತನದಿಂದ ಎದುರಿಸುವಲ್ಲಿ ವಿಫಲವಾದ ಭಾರತ ತಂಡ ಗೆಲ್ಲುವ ಅವಕಾಶ ಕೈಚೆಲ್ಲಿತು.

ಪಂದ್ಯ ಆರಂಭದ ವೇಳೆಯಲ್ಲಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ 7ನೇ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ತಂದು ಕೊಟ್ಟರು. ಇತ್ತ ಎದುರಾಳಿ ಜರ್ಮನ್‌ಗೆ ಸಿಕ್ಕ ಎರಡು ಪೆನಾಲ್ಟಿ ಅವಕಾಶವನ್ನು ಬಳಸಿಕೊಂಡು ಎರಡು ಗೋಲುಗಳನ್ನು ಗಳಿಸಿದರು. ಮೊದಲ ವಿರಾಮದ ಅಂತ್ಯಕ್ಕೆ ಜರ್ಮನಿ 2 ಹಾಗೂ ಭಾರತ 1 ಗೋಲು ಗಳಿಸಿ ಹಿನ್ನಡೆ ಅನುಭವಿಸತ್ತು.

ಮೊದಲಾರ್ಧದ ಬಳಿಕ ಪುಟಿದೆದ್ದ ಭಾರತ ತಂಡ ಎದುರಾಳಿಗೆ ತಕ್ಕ ಉತ್ತರ ನೀಡಿದರು. 36 ನೇ ನಿಮಿಷದಲ್ಲಿ ಗೋಲು ಬಾರಿಸಿದ ಸುಖ್‌ಜೀತ್‌ ಸಿಂಗ್‌ ತಂಡಕ್ಕೆ ಆಸರೆಯಾದರು.

ಉಳಿದ ಮೂವತ್ತು ನಿಮಿಷಗಳ ಕಾಲ ಒಂದೇ ಒಂದು ಗೋಲು ಗಳಿಸಲು ಇತ್ತಂಡಗಳು ಪರದಾಡಿದರು. ಜರ್ಮನ್‌ಗೆ ಎರಡು ಬಾರಿ ಅವಕಾಶ ಸಿಕ್ಕರೂ ಗೋಲು ಗಳಿಸುವಲ್ಲಿ ವಿಫಲರಾದರು. ಆದರೆ ಕೊನೆಯ 6 ನಿಮಿಷಗಳು ಬಾಕಿ ಇರುವಾಗ ಜರ್ಮನಿಯ ಮಾರ್ಕೊ 54ನೇ ನಿಮಿಷದಲ್ಲಿ ರೋಚಕ ಗೋಲು ಗಳಿಸಿ ಜರ್ಮನಿಗೆ ಮುನ್ನಡೆ ತಂದುಕೊಡುವ ಮೂಲಕ ಜರ್ಮನಿ ತಂಡ ಫೈನಲ್ಸ್‌ ತಲುಪಲು ಸಹಕರಿಸಿದರು.

ಕೊನೆವರೆಗೂ ರೋಚಕವಾಗಿ ಹೋರಾಟ ಮಾಡಿದ ಭಾರತ ತಂಡ ಫೈನಲ್ಸ್‌ ತಲುಪುವಲ್ಲಿ ವಿಫಲವಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

55 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

59 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago