ಕ್ರೀಡೆ

ನಂ.1 ಸ್ಥಾನ ಕಳೆದುಕೊಂಡ ಭಾರತ : ಅಗ್ರಸ್ಥಾನಕ್ಕೇರಿದ ಪಾಕಿಸ್ತಾನ

ಪೋರ್ಟ್ ಆಫ್ ಸ್ಪೇನ್ : 2023-25ನೇ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಭಾಗವಾಗಿ ಭಾರತ-ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದರಿಂದ ಭಾರತ 1-0 ಅಂತರದಲ್ಲಿ ಗೆಲುವು ಸಾಧಿಸಿದರೂ ವೆಸ್ಟ್‌ ಇಂಡೀಸ್‌ ತಂಡವನ್ನು ತವರಿನಲ್ಲೇ ವೈಟ್‌ವಾಶ್‌ ಮಾಡುವ ಕನಸು ಭಗ್ನಗೊಂಡಿತು. ಅಲ್ಲದೇ ವೆಸ್ಟ್‌ ಇಂಡೀಸ್‌ ವಿರುದ್ಧ ಕ್ಲೀನ್‌ ಸ್ವೀಪ್‌ ಮಾಡುವಲ್ಲಿ ಮಳೆ ಅಡ್ಡಿಯಾದ ಕಾರಣ ಪೂರ್ಣ ಪಾಯಿಂಟ್ಸ್‌ ಪಡೆಯುವ ಅವಕಾಶ ಕಳೆದುಕೊಂಡಿತು.

ವಿಂಡೀಸ್‌ ದ್ವಿತೀಯ ಸರಣಿ ಡ್ರಾನಲ್ಲಿ ಅಂತ್ಯಗೊಂಡ ಬಳಿಕ 24 ಅಂಕ ಪಡೆಯಬೇಕಿದ್ದ ಭಾರತ ತಂಡಕ್ಕೆ 16 ಅಂಕವಷ್ಟೇ ಲಭ್ಯವಾಯಿತು. ಇದರಿಂದ ಪಿಸಿಟಿ (Percentage Of Points Earned -ಗೆದ್ದ ಶೇಕಡಾವಾರು ಅಂಕ) 66.67ಕ್ಕೆ ಕುಸಿದು 2ನೇ ಸ್ಥಾನಕ್ಕೆ ಇಳಿಯಿತು. ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ ಗೆದ್ದ ನಂತರ 12 ಅಂಕ ಪಡೆದ ಪಾಕಿಸ್ತಾನ 100 ಪಿಸಿಟಿಯೊಂದಿಗೆ ಅಗ್ರಸ್ಥಾನಕ್ಕೇರಿತು. ಹಾಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯಾ 54.17 ಅಂಕ ಪಡೆದು 3ನೇ ಸ್ಥಾನ, 29.17 ಅಂಕ ಗಳಿಸಿರುವ ಇಂಗ್ಲೆಂಡ್‌ 4ನೇ ಸ್ಥಾನ, 16.67 ಅಂಕ ಪಡೆದ ವೆಸ್ಟ್‌ ಇಂಡೀಸ್‌ 5ನೇ ಸ್ಥಾನದಲ್ಲಿವೆ.
ವಿಶ್ವಕಪ್‌ ಟೂರ್ನಿ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಟೆಸ್ಟ್‌ ಸರಣಿಯನ್ನ ಆಡಲಿರುವ ಭಾರತ, ನಂತರ ಇಂಗ್ಲೆಂಡ್‌ ವಿರುದ್ಧ ಸ್ವದೇಶಿ ಸರಣಿಯನ್ನಾಡಲಿದೆ.

ವಿಂಡೀಸ್‌ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 141 ರನ್‌ಗಳ ಭರ್ಜರಿ ಜಯ ಸಾಧಿಸಿದ್ದ ಭಾರತ 2ನೇ ಟೆಸ್ಟ್‌ ನಲ್ಲೂ ಯಶಸ್ವಿ ಪ್ರದರ್ಶನವನ್ನೇ ನೀಡಿತ್ತು. 4ನೇ ದಿನದಾಟದಲ್ಲಿ ಸ್ಫೋಟಕ ಆರಂಭ ಪಡೆದ ಟೀಂ ಇಂಡಿಯಾ 181 ರನ್‌ ಗಳಿಸುವ ಮೂಲಕ ವೆಸ್ಟ್‌ ಇಂಡೀಸ್‌ಗೆ 365 ರನ್‌ಗಳ ಗುರಿ ನೀಡಿತ್ತು. ಆದ್ರೆ 4ನೇ ದಿನದ ಅಂತ್ಯಕ್ಕೆ 76 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿದ್ದ ವಿಂಡೀಸ್‌ 5ನೇ ದಿನದಲ್ಲಿ ಭಾರತದ ಎದುರು ವೈಟ್‌ವಾಶ್‌ ಆಗುವ ಸಾಧ್ಯತೆ ಹೊಂದಿತ್ತು. ಮಳೆ ಹಿನ್ನೆಲೆಯಲ್ಲಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.

ಸಂಕ್ಷಿಪ್ತ ಸ್ಕೋರ್‌

ಭಾರತ : ಮೊದಲ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 421/5 ಡಿಕ್ಲೇರ್‌
ವೆಸ್ಟ್‌ ಇಂಡೀಸ್‌ : ಮೊದಲ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 150/10
ವೆಸ್ಟ್‌ ಇಂಡೀಸ್‌ ಮೊದಲ ಟೆಸ್ಟ್‌ 2ನೇ ಇನ್ನಿಂಗ್ಸ್‌ – 130

ಭಾರತ : 2ನೇ ಟೆಸ್ಟ್‌‌ ಮೊದಲ ಇನ್ನಿಂಗ್ಸ್‌ – 438
ವೆಸ್ಟ್‌ ಇಂಡೀಸ್: 2ನೇ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 255
ಭಾರತ: 2ನೇ ಟೆಸ್ಟ್‌ 2ನೇ ಇನ್ನಿಂಗ್ಸ್‌ – 181/2 ಡಿಕ್ಲೇರ್‌
ವೆಸ್ಟ್‌ ಇಂಡೀಸ್‌ 2ನೇ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 76/2 ಡ್ರಾ

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago