ಕ್ರೀಡೆ

ನಂ.1 ಸ್ಥಾನ ಕಳೆದುಕೊಂಡ ಭಾರತ : ಅಗ್ರಸ್ಥಾನಕ್ಕೇರಿದ ಪಾಕಿಸ್ತಾನ

ಪೋರ್ಟ್ ಆಫ್ ಸ್ಪೇನ್ : 2023-25ನೇ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಭಾಗವಾಗಿ ಭಾರತ-ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದರಿಂದ ಭಾರತ 1-0 ಅಂತರದಲ್ಲಿ ಗೆಲುವು ಸಾಧಿಸಿದರೂ ವೆಸ್ಟ್‌ ಇಂಡೀಸ್‌ ತಂಡವನ್ನು ತವರಿನಲ್ಲೇ ವೈಟ್‌ವಾಶ್‌ ಮಾಡುವ ಕನಸು ಭಗ್ನಗೊಂಡಿತು. ಅಲ್ಲದೇ ವೆಸ್ಟ್‌ ಇಂಡೀಸ್‌ ವಿರುದ್ಧ ಕ್ಲೀನ್‌ ಸ್ವೀಪ್‌ ಮಾಡುವಲ್ಲಿ ಮಳೆ ಅಡ್ಡಿಯಾದ ಕಾರಣ ಪೂರ್ಣ ಪಾಯಿಂಟ್ಸ್‌ ಪಡೆಯುವ ಅವಕಾಶ ಕಳೆದುಕೊಂಡಿತು.

ವಿಂಡೀಸ್‌ ದ್ವಿತೀಯ ಸರಣಿ ಡ್ರಾನಲ್ಲಿ ಅಂತ್ಯಗೊಂಡ ಬಳಿಕ 24 ಅಂಕ ಪಡೆಯಬೇಕಿದ್ದ ಭಾರತ ತಂಡಕ್ಕೆ 16 ಅಂಕವಷ್ಟೇ ಲಭ್ಯವಾಯಿತು. ಇದರಿಂದ ಪಿಸಿಟಿ (Percentage Of Points Earned -ಗೆದ್ದ ಶೇಕಡಾವಾರು ಅಂಕ) 66.67ಕ್ಕೆ ಕುಸಿದು 2ನೇ ಸ್ಥಾನಕ್ಕೆ ಇಳಿಯಿತು. ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ ಗೆದ್ದ ನಂತರ 12 ಅಂಕ ಪಡೆದ ಪಾಕಿಸ್ತಾನ 100 ಪಿಸಿಟಿಯೊಂದಿಗೆ ಅಗ್ರಸ್ಥಾನಕ್ಕೇರಿತು. ಹಾಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯಾ 54.17 ಅಂಕ ಪಡೆದು 3ನೇ ಸ್ಥಾನ, 29.17 ಅಂಕ ಗಳಿಸಿರುವ ಇಂಗ್ಲೆಂಡ್‌ 4ನೇ ಸ್ಥಾನ, 16.67 ಅಂಕ ಪಡೆದ ವೆಸ್ಟ್‌ ಇಂಡೀಸ್‌ 5ನೇ ಸ್ಥಾನದಲ್ಲಿವೆ.
ವಿಶ್ವಕಪ್‌ ಟೂರ್ನಿ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಟೆಸ್ಟ್‌ ಸರಣಿಯನ್ನ ಆಡಲಿರುವ ಭಾರತ, ನಂತರ ಇಂಗ್ಲೆಂಡ್‌ ವಿರುದ್ಧ ಸ್ವದೇಶಿ ಸರಣಿಯನ್ನಾಡಲಿದೆ.

ವಿಂಡೀಸ್‌ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 141 ರನ್‌ಗಳ ಭರ್ಜರಿ ಜಯ ಸಾಧಿಸಿದ್ದ ಭಾರತ 2ನೇ ಟೆಸ್ಟ್‌ ನಲ್ಲೂ ಯಶಸ್ವಿ ಪ್ರದರ್ಶನವನ್ನೇ ನೀಡಿತ್ತು. 4ನೇ ದಿನದಾಟದಲ್ಲಿ ಸ್ಫೋಟಕ ಆರಂಭ ಪಡೆದ ಟೀಂ ಇಂಡಿಯಾ 181 ರನ್‌ ಗಳಿಸುವ ಮೂಲಕ ವೆಸ್ಟ್‌ ಇಂಡೀಸ್‌ಗೆ 365 ರನ್‌ಗಳ ಗುರಿ ನೀಡಿತ್ತು. ಆದ್ರೆ 4ನೇ ದಿನದ ಅಂತ್ಯಕ್ಕೆ 76 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿದ್ದ ವಿಂಡೀಸ್‌ 5ನೇ ದಿನದಲ್ಲಿ ಭಾರತದ ಎದುರು ವೈಟ್‌ವಾಶ್‌ ಆಗುವ ಸಾಧ್ಯತೆ ಹೊಂದಿತ್ತು. ಮಳೆ ಹಿನ್ನೆಲೆಯಲ್ಲಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.

ಸಂಕ್ಷಿಪ್ತ ಸ್ಕೋರ್‌

ಭಾರತ : ಮೊದಲ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 421/5 ಡಿಕ್ಲೇರ್‌
ವೆಸ್ಟ್‌ ಇಂಡೀಸ್‌ : ಮೊದಲ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 150/10
ವೆಸ್ಟ್‌ ಇಂಡೀಸ್‌ ಮೊದಲ ಟೆಸ್ಟ್‌ 2ನೇ ಇನ್ನಿಂಗ್ಸ್‌ – 130

ಭಾರತ : 2ನೇ ಟೆಸ್ಟ್‌‌ ಮೊದಲ ಇನ್ನಿಂಗ್ಸ್‌ – 438
ವೆಸ್ಟ್‌ ಇಂಡೀಸ್: 2ನೇ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 255
ಭಾರತ: 2ನೇ ಟೆಸ್ಟ್‌ 2ನೇ ಇನ್ನಿಂಗ್ಸ್‌ – 181/2 ಡಿಕ್ಲೇರ್‌
ವೆಸ್ಟ್‌ ಇಂಡೀಸ್‌ 2ನೇ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 76/2 ಡ್ರಾ

lokesh

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago