ಕ್ರೀಡೆ

ನಂ.1 ಸ್ಥಾನ ಕಳೆದುಕೊಂಡ ಭಾರತ : ಅಗ್ರಸ್ಥಾನಕ್ಕೇರಿದ ಪಾಕಿಸ್ತಾನ

ಪೋರ್ಟ್ ಆಫ್ ಸ್ಪೇನ್ : 2023-25ನೇ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಭಾಗವಾಗಿ ಭಾರತ-ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದರಿಂದ ಭಾರತ 1-0 ಅಂತರದಲ್ಲಿ ಗೆಲುವು ಸಾಧಿಸಿದರೂ ವೆಸ್ಟ್‌ ಇಂಡೀಸ್‌ ತಂಡವನ್ನು ತವರಿನಲ್ಲೇ ವೈಟ್‌ವಾಶ್‌ ಮಾಡುವ ಕನಸು ಭಗ್ನಗೊಂಡಿತು. ಅಲ್ಲದೇ ವೆಸ್ಟ್‌ ಇಂಡೀಸ್‌ ವಿರುದ್ಧ ಕ್ಲೀನ್‌ ಸ್ವೀಪ್‌ ಮಾಡುವಲ್ಲಿ ಮಳೆ ಅಡ್ಡಿಯಾದ ಕಾರಣ ಪೂರ್ಣ ಪಾಯಿಂಟ್ಸ್‌ ಪಡೆಯುವ ಅವಕಾಶ ಕಳೆದುಕೊಂಡಿತು.

ವಿಂಡೀಸ್‌ ದ್ವಿತೀಯ ಸರಣಿ ಡ್ರಾನಲ್ಲಿ ಅಂತ್ಯಗೊಂಡ ಬಳಿಕ 24 ಅಂಕ ಪಡೆಯಬೇಕಿದ್ದ ಭಾರತ ತಂಡಕ್ಕೆ 16 ಅಂಕವಷ್ಟೇ ಲಭ್ಯವಾಯಿತು. ಇದರಿಂದ ಪಿಸಿಟಿ (Percentage Of Points Earned -ಗೆದ್ದ ಶೇಕಡಾವಾರು ಅಂಕ) 66.67ಕ್ಕೆ ಕುಸಿದು 2ನೇ ಸ್ಥಾನಕ್ಕೆ ಇಳಿಯಿತು. ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ ಗೆದ್ದ ನಂತರ 12 ಅಂಕ ಪಡೆದ ಪಾಕಿಸ್ತಾನ 100 ಪಿಸಿಟಿಯೊಂದಿಗೆ ಅಗ್ರಸ್ಥಾನಕ್ಕೇರಿತು. ಹಾಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯಾ 54.17 ಅಂಕ ಪಡೆದು 3ನೇ ಸ್ಥಾನ, 29.17 ಅಂಕ ಗಳಿಸಿರುವ ಇಂಗ್ಲೆಂಡ್‌ 4ನೇ ಸ್ಥಾನ, 16.67 ಅಂಕ ಪಡೆದ ವೆಸ್ಟ್‌ ಇಂಡೀಸ್‌ 5ನೇ ಸ್ಥಾನದಲ್ಲಿವೆ.
ವಿಶ್ವಕಪ್‌ ಟೂರ್ನಿ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಟೆಸ್ಟ್‌ ಸರಣಿಯನ್ನ ಆಡಲಿರುವ ಭಾರತ, ನಂತರ ಇಂಗ್ಲೆಂಡ್‌ ವಿರುದ್ಧ ಸ್ವದೇಶಿ ಸರಣಿಯನ್ನಾಡಲಿದೆ.

ವಿಂಡೀಸ್‌ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 141 ರನ್‌ಗಳ ಭರ್ಜರಿ ಜಯ ಸಾಧಿಸಿದ್ದ ಭಾರತ 2ನೇ ಟೆಸ್ಟ್‌ ನಲ್ಲೂ ಯಶಸ್ವಿ ಪ್ರದರ್ಶನವನ್ನೇ ನೀಡಿತ್ತು. 4ನೇ ದಿನದಾಟದಲ್ಲಿ ಸ್ಫೋಟಕ ಆರಂಭ ಪಡೆದ ಟೀಂ ಇಂಡಿಯಾ 181 ರನ್‌ ಗಳಿಸುವ ಮೂಲಕ ವೆಸ್ಟ್‌ ಇಂಡೀಸ್‌ಗೆ 365 ರನ್‌ಗಳ ಗುರಿ ನೀಡಿತ್ತು. ಆದ್ರೆ 4ನೇ ದಿನದ ಅಂತ್ಯಕ್ಕೆ 76 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿದ್ದ ವಿಂಡೀಸ್‌ 5ನೇ ದಿನದಲ್ಲಿ ಭಾರತದ ಎದುರು ವೈಟ್‌ವಾಶ್‌ ಆಗುವ ಸಾಧ್ಯತೆ ಹೊಂದಿತ್ತು. ಮಳೆ ಹಿನ್ನೆಲೆಯಲ್ಲಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.

ಸಂಕ್ಷಿಪ್ತ ಸ್ಕೋರ್‌

ಭಾರತ : ಮೊದಲ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 421/5 ಡಿಕ್ಲೇರ್‌
ವೆಸ್ಟ್‌ ಇಂಡೀಸ್‌ : ಮೊದಲ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 150/10
ವೆಸ್ಟ್‌ ಇಂಡೀಸ್‌ ಮೊದಲ ಟೆಸ್ಟ್‌ 2ನೇ ಇನ್ನಿಂಗ್ಸ್‌ – 130

ಭಾರತ : 2ನೇ ಟೆಸ್ಟ್‌‌ ಮೊದಲ ಇನ್ನಿಂಗ್ಸ್‌ – 438
ವೆಸ್ಟ್‌ ಇಂಡೀಸ್: 2ನೇ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 255
ಭಾರತ: 2ನೇ ಟೆಸ್ಟ್‌ 2ನೇ ಇನ್ನಿಂಗ್ಸ್‌ – 181/2 ಡಿಕ್ಲೇರ್‌
ವೆಸ್ಟ್‌ ಇಂಡೀಸ್‌ 2ನೇ ಟೆಸ್ಟ್‌ ಮೊದಲ ಇನ್ನಿಂಗ್ಸ್‌ – 76/2 ಡ್ರಾ

lokesh

Recent Posts

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

59 mins ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

1 hour ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

3 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

4 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

4 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

4 hours ago