ಕ್ರೀಡೆ

ಫಾಲೋ ಆನ್‌ನಿಂದ ತಪ್ಪಿಸಿಕೊಂಡ ಭಾರತ

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಫಾಲೋಆನ್‌ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕೆ.ಎಲ್‌.ರಾಹುಲ್‌(84), ರವೀಂದ್ರ ಜಡೇಜಾ (77), ಹಾಗೂ ಕೊನೆಯಲ್ಲಿ ಆಕಾಶ್‌ ದೀಪ್‌ (27) ಅವರ ಉತ್ತಮ ಆಟದ ಮೂಲಕ ಭಾರತ ಅಲ್ಪಮಟ್ಟಿಗೆ ಯಶಸ್ಸು ಸಾಧಿಸಿದೆ.

ಬ್ರಿಸ್ಬೇನ್‌ನಲ್ಲಿ ಸತತವಾಗಿ ಸುರಿದ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದರಿಂದ ಭಾರತ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ 9 ವಿಕೆಟ್‌ ನಷ್ಟಕ್ಕೆ 74.5 ಓವರ್‌ಗಳಲ್ಲಿ 252 ರನ್‌ಗಳಿಸಿ ಕೊಂಚ ನಿರಾಳವಾಗಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ ಬಾರಿಸಿ ಆಲೌಟ್‌ ಆಯಿತು. ಇದಕ್ಕುತ್ತರವಾಗಿ ತನ್ನ ಪಾಲಿನ ಇನ್ನಿಂಗ್ಸ್‌ ಶುರುಮಾಡಿದ ಭಾರತ ಆರಂಭಿಕ ಬ್ಯಾಟರ್‌ಗಳ ವೈಫಲ್ಯದಿಂದ ಫಾಲೋಆನ್‌ ಭೀತಿಗೆ ಸಿಲುಕಿತು.

ಫಾಲೋಆನ್‌ನಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ 245 ರನ್‌ಗಳ ಆವಶ್ಯಕತೆ ಇದ್ದಾಗ, ಜಸ್ಪ್ರೀತ್‌ ಬುಮ್ರ ಹಾಗೂ ಆಕಾಶ್‌ ದೀಪ್‌ 10ನೇ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ಆಡುವ ಮೂಲಕ ಫಾಲೋಆನ್‌ ಹೇರುವುದನ್ನು ತಪ್ಪಿಸಿದರು.

ನಂತರ ಮಂದ ಬೆಳಕಿನ ಕಾರಣ 4ನೇ ದಿನದಾಟವನ್ನು ಅಂತ್ಯಗೊಳಿಸಲಾಯಿತು. ಆ ವೇಳೆ ಆಕಾಶ್‌ ದೀಪ್‌ 27 ರನ್‌(2 ಬೌಂಡರಿ 1 ಸಿಕ್ಸರ್‌) ಹಾಗೂ ಬುಮ್ರಾ 10 ರನ್‌ಗಳಿಸಿದ್ದಾರೆ.

ಟೆಸ್ಟ್‌ ಪಂದ್ಯಕ್ಕೆ ಇನ್ನೊಂದು ದಿನ ಬಾಕಿಯಿದ್ದು, ಭಾರತ ಕನಿಷ್ಠ ಡ್ರಾಗೊಳಿಸಲು ಯತ್ನಿಸಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago