ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಫಾಲೋಆನ್ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕೆ.ಎಲ್.ರಾಹುಲ್(84), ರವೀಂದ್ರ ಜಡೇಜಾ (77), ಹಾಗೂ ಕೊನೆಯಲ್ಲಿ ಆಕಾಶ್ ದೀಪ್ (27) ಅವರ ಉತ್ತಮ ಆಟದ ಮೂಲಕ ಭಾರತ ಅಲ್ಪಮಟ್ಟಿಗೆ ಯಶಸ್ಸು ಸಾಧಿಸಿದೆ.
ಬ್ರಿಸ್ಬೇನ್ನಲ್ಲಿ ಸತತವಾಗಿ ಸುರಿದ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದರಿಂದ ಭಾರತ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ 9 ವಿಕೆಟ್ ನಷ್ಟಕ್ಕೆ 74.5 ಓವರ್ಗಳಲ್ಲಿ 252 ರನ್ಗಳಿಸಿ ಕೊಂಚ ನಿರಾಳವಾಗಿದೆ.
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 445 ರನ್ ಬಾರಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ತನ್ನ ಪಾಲಿನ ಇನ್ನಿಂಗ್ಸ್ ಶುರುಮಾಡಿದ ಭಾರತ ಆರಂಭಿಕ ಬ್ಯಾಟರ್ಗಳ ವೈಫಲ್ಯದಿಂದ ಫಾಲೋಆನ್ ಭೀತಿಗೆ ಸಿಲುಕಿತು.
ಫಾಲೋಆನ್ನಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ 245 ರನ್ಗಳ ಆವಶ್ಯಕತೆ ಇದ್ದಾಗ, ಜಸ್ಪ್ರೀತ್ ಬುಮ್ರ ಹಾಗೂ ಆಕಾಶ್ ದೀಪ್ 10ನೇ ವಿಕೆಟ್ಗೆ 39 ರನ್ಗಳ ಜೊತೆಯಾಟ ಆಡುವ ಮೂಲಕ ಫಾಲೋಆನ್ ಹೇರುವುದನ್ನು ತಪ್ಪಿಸಿದರು.
ನಂತರ ಮಂದ ಬೆಳಕಿನ ಕಾರಣ 4ನೇ ದಿನದಾಟವನ್ನು ಅಂತ್ಯಗೊಳಿಸಲಾಯಿತು. ಆ ವೇಳೆ ಆಕಾಶ್ ದೀಪ್ 27 ರನ್(2 ಬೌಂಡರಿ 1 ಸಿಕ್ಸರ್) ಹಾಗೂ ಬುಮ್ರಾ 10 ರನ್ಗಳಿಸಿದ್ದಾರೆ.
ಟೆಸ್ಟ್ ಪಂದ್ಯಕ್ಕೆ ಇನ್ನೊಂದು ದಿನ ಬಾಕಿಯಿದ್ದು, ಭಾರತ ಕನಿಷ್ಠ ಡ್ರಾಗೊಳಿಸಲು ಯತ್ನಿಸಬೇಕಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…