ಕ್ರೀಡೆ

ಫಾಲೋ ಆನ್‌ನಿಂದ ತಪ್ಪಿಸಿಕೊಂಡ ಭಾರತ

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಫಾಲೋಆನ್‌ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕೆ.ಎಲ್‌.ರಾಹುಲ್‌(84), ರವೀಂದ್ರ ಜಡೇಜಾ (77), ಹಾಗೂ ಕೊನೆಯಲ್ಲಿ ಆಕಾಶ್‌ ದೀಪ್‌ (27) ಅವರ ಉತ್ತಮ ಆಟದ ಮೂಲಕ ಭಾರತ ಅಲ್ಪಮಟ್ಟಿಗೆ ಯಶಸ್ಸು ಸಾಧಿಸಿದೆ.

ಬ್ರಿಸ್ಬೇನ್‌ನಲ್ಲಿ ಸತತವಾಗಿ ಸುರಿದ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದ್ದರಿಂದ ಭಾರತ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ 9 ವಿಕೆಟ್‌ ನಷ್ಟಕ್ಕೆ 74.5 ಓವರ್‌ಗಳಲ್ಲಿ 252 ರನ್‌ಗಳಿಸಿ ಕೊಂಚ ನಿರಾಳವಾಗಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ ಬಾರಿಸಿ ಆಲೌಟ್‌ ಆಯಿತು. ಇದಕ್ಕುತ್ತರವಾಗಿ ತನ್ನ ಪಾಲಿನ ಇನ್ನಿಂಗ್ಸ್‌ ಶುರುಮಾಡಿದ ಭಾರತ ಆರಂಭಿಕ ಬ್ಯಾಟರ್‌ಗಳ ವೈಫಲ್ಯದಿಂದ ಫಾಲೋಆನ್‌ ಭೀತಿಗೆ ಸಿಲುಕಿತು.

ಫಾಲೋಆನ್‌ನಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ 245 ರನ್‌ಗಳ ಆವಶ್ಯಕತೆ ಇದ್ದಾಗ, ಜಸ್ಪ್ರೀತ್‌ ಬುಮ್ರ ಹಾಗೂ ಆಕಾಶ್‌ ದೀಪ್‌ 10ನೇ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ಆಡುವ ಮೂಲಕ ಫಾಲೋಆನ್‌ ಹೇರುವುದನ್ನು ತಪ್ಪಿಸಿದರು.

ನಂತರ ಮಂದ ಬೆಳಕಿನ ಕಾರಣ 4ನೇ ದಿನದಾಟವನ್ನು ಅಂತ್ಯಗೊಳಿಸಲಾಯಿತು. ಆ ವೇಳೆ ಆಕಾಶ್‌ ದೀಪ್‌ 27 ರನ್‌(2 ಬೌಂಡರಿ 1 ಸಿಕ್ಸರ್‌) ಹಾಗೂ ಬುಮ್ರಾ 10 ರನ್‌ಗಳಿಸಿದ್ದಾರೆ.

ಟೆಸ್ಟ್‌ ಪಂದ್ಯಕ್ಕೆ ಇನ್ನೊಂದು ದಿನ ಬಾಕಿಯಿದ್ದು, ಭಾರತ ಕನಿಷ್ಠ ಡ್ರಾಗೊಳಿಸಲು ಯತ್ನಿಸಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago