ಕ್ರೀಡೆ

ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿಯ ಅಗತ್ಯವಿದೆ: ಚೇತನ್‌ ಅಹಿಂಸಾ

ಬೆಂಗಳೂರು : ಆಗಾಗ್ಗೆ ತಮ್ಮ ಸೈದ್ದಾಂತಿಕ, ಸಾಮಾಜಿಕ ಹೇಳಿಕೆಗಳಿಂದ ಸುದ್ದಿ ಹಾಗೂ ವಿವಾದಕ್ಕೊಳಗಾಗುವ ನಟ ಚೇತನ್ ಅಹಿಂಸಾ ಇದೀಗ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಮಾತನಾಡಿದ್ದು, ಇದೀಗ ಭಾರೀ ವೈರಲ್‌ ಆಗಿದ್ದು, ಪರ ವಿರೋಧ ಚರ್ಚೆಗಳಾಗುತ್ತಿವೆ.

ಭಾರತೀಯ ಕ್ರಿಕೆಟ್ ನಲ್ಲಿ ಮೀಸಲಾತಿ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಚೇತನ್, ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು ಎಂದಿದ್ದಾರೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ  ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ೬ ವಿಕೆಟ್ ಗಳ ಹೀನಾಯ ಸೋಲು ಕಂಡಿತ್ತು. ಆಸೀಸ್‌  6ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರಿತು.

ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿರಾಟ್‌ ಕೊಹ್ಲಿ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದರು. ಶಮಿ ಅತಿ ಹೆಚ್ಚು ವಿಕೆಟ್‌ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.

andolanait

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

1 hour ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

3 hours ago