ಬೆಂಗಳೂರು : ಆಗಾಗ್ಗೆ ತಮ್ಮ ಸೈದ್ದಾಂತಿಕ, ಸಾಮಾಜಿಕ ಹೇಳಿಕೆಗಳಿಂದ ಸುದ್ದಿ ಹಾಗೂ ವಿವಾದಕ್ಕೊಳಗಾಗುವ ನಟ ಚೇತನ್ ಅಹಿಂಸಾ ಇದೀಗ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಮಾತನಾಡಿದ್ದು, ಇದೀಗ ಭಾರೀ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗಳಾಗುತ್ತಿವೆ.
ಭಾರತೀಯ ಕ್ರಿಕೆಟ್ ನಲ್ಲಿ ಮೀಸಲಾತಿ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಚೇತನ್, ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು ಎಂದಿದ್ದಾರೆ.
ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ೬ ವಿಕೆಟ್ ಗಳ ಹೀನಾಯ ಸೋಲು ಕಂಡಿತ್ತು. ಆಸೀಸ್ 6ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರಿತು.
ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದರು. ಶಮಿ ಅತಿ ಹೆಚ್ಚು ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…