ಬೆಂಗಳೂರು : ಆಗಾಗ್ಗೆ ತಮ್ಮ ಸೈದ್ದಾಂತಿಕ, ಸಾಮಾಜಿಕ ಹೇಳಿಕೆಗಳಿಂದ ಸುದ್ದಿ ಹಾಗೂ ವಿವಾದಕ್ಕೊಳಗಾಗುವ ನಟ ಚೇತನ್ ಅಹಿಂಸಾ ಇದೀಗ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಮಾತನಾಡಿದ್ದು, ಇದೀಗ ಭಾರೀ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗಳಾಗುತ್ತಿವೆ.
ಭಾರತೀಯ ಕ್ರಿಕೆಟ್ ನಲ್ಲಿ ಮೀಸಲಾತಿ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಚೇತನ್, ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು ಎಂದಿದ್ದಾರೆ.
ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ೬ ವಿಕೆಟ್ ಗಳ ಹೀನಾಯ ಸೋಲು ಕಂಡಿತ್ತು. ಆಸೀಸ್ 6ನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರಿತು.
ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಸರಣಿ ಪುರುಷೋತ್ತಮ ಪ್ರಶಸ್ತಿ ಪಡೆದರು. ಶಮಿ ಅತಿ ಹೆಚ್ಚು ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…