ಕ್ರೀಡೆ

ಇದೇ ಭಾನುವಾರ ಭಾರತ-ಪಾಕ್‌ ಮತ್ತೆ ಮುಖಾಮುಖಿ : ಕಾತುರದಿಂದ ಎದುರು ನೋಡುತ್ತಿರುವ ಅಭಿಮಾನಿಗಳು

ಏಷ್ಯಾಕಪ್: ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್​ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್​ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.

ಇನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್​- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಒಂದು ವೇಳೆ ಹಾಂಗ್​ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.

ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್​ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.

 

andolana

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

13 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

30 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

43 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago