ಕ್ರೀಡೆ

ಇದೇ ಭಾನುವಾರ ಭಾರತ-ಪಾಕ್‌ ಮತ್ತೆ ಮುಖಾಮುಖಿ : ಕಾತುರದಿಂದ ಎದುರು ನೋಡುತ್ತಿರುವ ಅಭಿಮಾನಿಗಳು

ಏಷ್ಯಾಕಪ್: ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್​ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್​ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.

ಇನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್​- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಒಂದು ವೇಳೆ ಹಾಂಗ್​ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.

ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್​ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.

 

andolana

Recent Posts

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

1 hour ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

2 hours ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

2 hours ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

2 hours ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

2 hours ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

3 hours ago